ಚಿಕ್ಕಮಗಳೂರು: ಕಾಂಗ್ರೆಸ್ನ ಎಲ್ಲಾ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದು ವುದರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ಷೇತ್ರದಲ್ಲಿ ಭ್ರಷ್ಟರಹಿತ ಆಡಳಿತ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಸಂಚಾಲಕ ಸಿ.ಎನ್.ಅಕ್ಮಲ್ ಹೇಳಿದರು.
ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿ ಸಲಾಗಿದ್ದ ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ನೇಮಕಾತಿ ಹಾಗೂ ಅಭಿನಂದನೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕಾಂಗ್ರೆಸ್ನಲ್ಲಿ ನಿಷ್ಟಾವಂತ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತಹ ವರನ್ನು ಜಿಲ್ಲಾ ಹಾಗೂ ರಾಜ್ಯ ಸಮಿತಿ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದ್ದಲ್ಲಿ ಸಿ.ಟಿ.ರವಿಯವಂತಹ ಎಷ್ಟು ಮಂದಿ ಶಾಸಕರನ್ನು ಪರಾಭವಗೊಳಿಸಿ ಜಿಲ್ಲೆ ಹಾಗೂ ರಾಜಾದ್ಯಂತ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಬಹುದು ಎಂದು ಹೇಳಿದರು.
ಪಕ್ಷದಲ್ಲಿ 2 ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿಕೊಂಡು ಬಂದಿದ್ದು ಕೆಲವು ಸಣ್ಣಪುಟ್ಟ ವಿಚಾರ ಗಳಲ್ಲಿ ಸಮಸ್ಯೆಯಾಗಿದೆ. ಎಂತಹ ಸಮಸ್ಯೆಗಳಿದ್ದರೂ ಹಿರಿಯ ಮುಖಂಡರುಗಳು ಪರಸ್ಪರ ಚರ್ಚಿಸಿದರೆ ಸಮಸ್ಯೆ ಬಗೆಹರಿಸಬಹುದು. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಕೈಜೋಡಿಸಿ ಪಕ್ಷ ಚಟುವಟಿಕೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ರಸೂಲ್ಖಾನ್ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಹಗಲು-ರಾತ್ರಿ ಎನ್ನದೇ ವೈಯಕ್ತಿಕ ಖರ್ಚಿನಿಂದ ಆಹಾರ ಕಿಟ್, ಅಂಬುಲೆನ್ಸ್ ಸೇವೆ ನೀಡಿ ಸಹಾಯ ಮಾಡಿವರು ಅಕ್ಮಲ್ ಎಂದ ಅವರು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಕಾಂಗ್ರೆಸ್ನ್ನು ಬಿಡದೇ ಕಾರ್ಯಚಟುವಟಿಕೆಯಲ್ಲಿ ತೊಡಗಿರುವುದೇ ಇಂದಿನ ಅಭಿನಂದನಾ ಸಮಾರಂಭ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಮಹಮ್ಮದ್ ಮಾತನಾಡಿ ನಗರಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಯಲ್ಲಿ ಕೆಲವೇ ಅಂತರದಲ್ಲಿ ಸೋಲುಭವಿಸಿದೆವು. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆ ರೀತಿಯ ತಪ್ಪುಗಳಾಗದಂತೆ ಸೂಕ್ತ ಹಾಗೂ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಗೆಲುವಿಗೆ ಪಕ್ಷವು ಪೂರಕವಾಗಬೇಕು ಎಂದರು.
ಇದೇ ವೇಳೆ ಸಿ.ಎನ್.ಅಕ್ಮಲ್ ಅವರಿಗೆ ಕಿಸಾನ್ ಕಾಂಗ್ರೆಸ್ ಹಾಗೂ ಪಕ್ಷದ ಮುಖಂಡರುಗಳು ಅಭಿನಂದ ನೆ ಸಲ್ಲಿಸಿ ಗೌರವಿಸಿದರು. ನಂತರ 12 ಮಂದಿ ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್, ಜಿಲ್ಲಾ ವಕ್ತಾರ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಅತೀಕ್ ಖೈಸರ್, ಪ್ರಚಾರ ಸಮಿತಿ ಸಂಚಾಲಕ ಬಿ.ಹೆಚ್.ಹರೀಶ್, ಮುಖಂಡರುಗಳಾದ ತನೋಜ್, ನೂರ್ಅಹ್ಮದ್, ನಜೀರ್ ಅಹ್ಮದ್, ಮಂಜು ನಾಥ್, ದೇವರಹಳ್ಳಿ ಉಮೇಶ್, ಧನಂಜಯ್, ದೇವನೂರು ಅಶೋಕ್ ಮತ್ತಿತರರು ಹಾಜರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.