ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಲಸಿಕಾ ಕಾರ್ಯಕ್ರಮದಡಿ 4 ರಿಂದ 8 ತಿಂಗಳ ಅರ್ಹ ಆಕಳು /ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದೆ.
ಫೆಬ್ರವರಿ 13 ರಿಂದ ಆರಂಭಗೊಂಡಿರುವ ಈ ಲಸಿಕಾ ಅಭಿಯಾನ ಫೆಬ್ರವರಿ 28 ರವರೆಗೆ ನಡೆಯುತ್ತದೆ.
ಕಂದು ರೋಗವು ಪ್ರಾಣಿಜನ್ಯ ರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಈ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದ ಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳಲು ಕೋರಿದೆ.
ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು ಗ್ರಾಮವಾರು ತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಶಿವಯೋಗಿ ಬಿ.ಯಲಿ ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.