Shivamogga ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿ ಇರುವ ಛಾಯಾದೇವಿ ಸಭಾಂಗಣದಲ್ಲಿ ನಗರದ ಬೊಮ್ಮನಕಟ್ಟೆ ದೇವಂಗಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಉದ್ಘಾಟನಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ನಡೆಸಲಾಯಿತು.
ಈ ಸಭೆಯು ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರು, ಮಾಜಿ ಉಪಮುಖ್ಯಮಂತ್ರಿಗಳು,ಕ್ಷೇತ್ರದ ಶಾಸಕರಾದ ಶ್ರೀ ಕೆ ಎಸ್ ಈಶ್ವರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಮಠದ ಪರವಾಗಿ ಕನಕವೀಡು ಗಿರೀಶ್ ರವರು ಮಠದ ನಿರ್ಮಾಣದ ಬಗ್ಗೆ ಮಾನ್ಯ ಈಶ್ವರಪ್ಪನವರ ಹಾಗೂ ಪೂಜ್ಯ ಸ್ವಾಮೀಜಿಗಳ ಒಟ್ಟಾರೆ ಅಪೇಕ್ಷೆ ಮತ್ತು ಆಸಕ್ತಿ ಬಗ್ಗೆ ಮಾಹಿತಿ ನೀಡಿದರು.
Shivamogga ಸಂಸ್ಥೆಯ ಸಂಚಾಲಕರಾದ ಮಧುಸೂದನರವರು ಪ್ರಾಸ್ತಾವಿಕವಾಗಿ ಮಾತನಾಡಿ ಮಠದ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ವಿವರಣೆ ಮತ್ತು ನಿರ್ವಹಿಸಬೇಕಾದ ಜವಾಬ್ದಾರಿ ಹಾಗೂ ಅದಕ್ಕೆ ಸರ್ವರ ಸಹಕಾರ ಕೋರಿದರು.
ಖಜಾಂಚಿಯಾದ ಕೆ. ಈ. ಕಾಂತೇಶ್ ಅವರು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ಕೋರಿದರು.ಈ ಸಭೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು, ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಪ್ರಮುಖರು, ಭಜನಾ ಪರಿಷತ್ತಿನ ಪ್ರಮುಖರು ಪಾಲ್ಗೊಂಡಿದ್ದು ಉಪಸ್ಥಿತರಿದ್ದ ಹಲವು ಪ್ರಮುಖರ ಸಲಹೆ ಸೂಚನೆಗಳನ್ನು ಪಡೆದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.