ಶಿವಮೊಗ್ಗದ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು, ಹಾವು ಕಡಿತ ಹೀಗೆ ಮುಂತಾದ ಪ್ರಕರಣಗಳಲ್ಲಿ ಸಂತ್ರಸ್ಥರ ಕುಟುಂಬಕ್ಕೆ ತಕ್ಷಣವೇ ಪರಿಹಾರ ನೀಡಬೇಕು. ಇದಕ್ಕೆ ಜಿಲ್ಲಾಡಳಿತ ಅನುದಾನ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಸೂಚಿಸಿದ್ದಾರೆ.
ಸಹಾಯಧನವನ್ನು ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡುವವರೆಗೂ ಮಂದಗತಿಯಲ್ಲಿ ಕಾರ್ಯ ನಿರ್ವಹಿಸಬಾರದು. ಜಿಲ್ಲಾಡಳಿತದ ಅನುದಾನವನ್ನು ಬಳಸಿಕೊಂಡು ಶೀಘ್ರದಲ್ಲಿ ಪರಿಹಾರಧನ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಸಮಯದಲ್ಲಿ ಸುರಿಯುತ್ತಿರುವ ಮಳೆಯಿಂದ ಆಗುತ್ತಿರುವ ಬೆಳೆ, ಜೀವ ಹಾನಿ ಮಾಹಿತಿ ಪಡೆದು ತಕ್ಷಣ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅದರ ಗಡವು ಮೀರುವ ಒಳಗೆ ಪೂರ್ಣಗೊಳಿಸಬೇಕು.
ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕೆಲವು ವರ್ಷಗಳಿಂದ ಮನೆ ಕಟ್ಟಿಕೊಂಡಿಲ್ಲ. ಕಳೆದ ಬಾರಿಯ ಮಳೆಯ ಪರಿಣಾಮವಾಗಿ ಅನೇಕ ಮನೆಗಳು ನೆಲ ಸಮಾಧಿಯಾಗಿವೆ. ನಿರಾಶ್ರಿತರಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು. ಫಲಾನುಭವಿಗಳು ಈಗಾಗಲೇ ಮನೆ ನಿರ್ಮಿಸಿಕೊಂಡಿದ್ದಾರೆ. ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಅನುದಾನ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಸಭೆಯಲ್ಲಿ ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.