Tuesday, October 1, 2024
Tuesday, October 1, 2024

Pancharatna Yatna ಫೆ.28 ಪಂಚರತ್ನಯಾತ್ರೆ ಚಿಕ್ಕಮಗಳೂರು ಜೆಡಿಎಸ್ ಸಕಲಸಜ್ಜು

Date:

Pancharatna Yatna ಚಿಕ್ಕಮಗಳೂರು ಕ್ಷೇತ್ರದಲ್ಲಿ ಫೆ.28 ರಂದು ಪಂಚರತ್ನ ಯಾತ್ರೆಯ ಕಾರ್ಯಕ್ರಮವು ಸಂಚರಿಸುವ ಹಿನ್ನೆಲೆಯಲ್ಲಿ ಅಂದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಅತ್ಯಂತ ಅದ್ದೂರಿಯಾಗಿ ಯಾತ್ರೆಯನ್ನು ಸ್ವಾಗತಿಸಲು ಸಿದ್ದತೆ ನಡೆಸಲಾಗಿದೆ ಎಂದು ಜೆಡಿಎಸ್ ನಗರ ಮಹಾಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ ಹೇಳಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಪಂಚರತ್ನ ಯಾತ್ರೆಯು ತಾಲ್ಲೂಕಿನ ದೇವನೂರು, ಸಖರಾಯಪಟ್ಟಣ, ಲಕ್ಯಾ ಮಾರ್ಗವಾಗಿ ನಗರದ ಎಐಟಿ ಸರ್ಕಲ್‌ಗೆ ಸಮೀಪಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಸ್ವಾಗತಿಸಲು ಮುಂದಾಗಲಾಗುವುದು ಎಂದು ತಿಳಿಸಿದ್ದಾರೆ.

ಯಾತ್ರೆಯು ನಗರಕ್ಕೆ ಸಮೀಪಿಸುವ ಮೊದಲನೇ ಸುಮಾರು ಮೂರು ಸಾವಿರ ಮಂದಿ ಬೈಕ್‌ಜಾಥಾದ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ಎಐಟಿ ಸರ್ಕಲ್ ತಲುಪಿ ಪಂಚರತ್ನ ಯಾತ್ರೆ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಮೆರವಣಿಗೆ ಮೂಲಕ ಕರೆತರಲಾಗುವುದು ಎಂದಿದ್ದಾರೆ.

Pancharatna Yatna ಪಂಚರತ್ನ ಯಾತ್ರೆಯ ಮೆರವಣಿಗೆಯು ಹನುಮಂತಪ್ಪ ಸರ್ಕಲ್ ಬಂದಾಕ್ಷಣ ಡೊಳ್ಳುಕುಣಿತ, ಡಿ.ಜೆ. ಸೇರಿದಂತೆ ಐವತ್ತು ಹೆಚ್ಚು ಕಲಾತಂಡಗಳೊಂದಿಗೆ ಆಜಾದ್‌ಪಾರ್ಕ್ವರೆಗೆ ಹತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತ ರು, ಮುಖಂಡರುಗಳು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬೃಹತ್ ಬಹಿರಂಗ ಸಭೆ ನಡೆಯಲಿದ್ದು ನಂತರ ತೇಗೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಕೆ. ಇಬ್ರಾಹಿಂ, ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಕ್ಷೇತ್ರದ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...