Saturday, May 23, 2026
Saturday, May 23, 2026

Chikmagalur Jail ಚಿಕ್ಕಮಗಳೂರು ಕಾರಾಗೃಹ ಸಿಬ್ಬಂದಿಯಿಂದ ವಿನೂತನ ಕಾರ್ಯಕ್ರಮ

Date:

Chikmagalur Jail  ಪ್ರತಿನಿತ್ಯ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಧಿಕಾರಿಗಳ ತಂಡ ಬಂಧಿಗಳ ದಾಖ ಲಾತಿ ತಪಾಸಣೆ, ಗದ್ದಲ ಹಾಗೂ ರಾಜೀ ಸಂಧಾನಕ್ಕೆ ನಿರತರಾಗಿರುವ ಸಂದರ್ಭದಲ್ಲಿ ಕಾರಾಗೃಹ ಇಲಾಖೆಯ ಮಹಿಳಾ ಪೇದೆಗೆ ಸೀಮಂತ ನಡೆಸುವ ಮೂಲಕ ಅಪರೂಪ ಕಾರ್ಯಕ್ರಮ ಆಯೋಜಿಸಿ ಸಂಭ್ರಮಿಸುತ್ತಿರುವುದು ಋಷಿ ತಂದಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್. ಮೇಟಿ ಅವರು ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಕಲ್ಯಾಣ ದಿನಾಚರಣೆ ಪ್ರಯುಕ್ತ ಇಲಾಖೆಯ ಮಹಿಳಾ ಪೇದೆ ಜಿ.ಲಾವಣ್ಯ ಅವರಿಗೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಸದಾ ಕಾಲ ಗದ್ದಲ, ದೂರು- ಪ್ರತಿ ದೂರು, ರಾಜೀ ಸಂಧಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಹಿಳಾ ಪೊಲೀಸ್ ಪೇದೆ ಲಾವಣ್ಯ ಅವರಿಗೆ ಸಹೋದ್ಯೋಗಿ ಸಿಬ್ಬಂದಿಗಳು ಆರತಿ ಬೆಳಗಿ, ಮಡಿಲು ತುಂಬುವುದರೊಂದಿಗೆ ಮನದುಂಬಿ ಹರಸಿ, ಬೀಳ್ಕೊಟ್ಟ ಅಪರೂಪದ ಸೀಮಂತ ಕಾರ್ಯಕ್ರಮ ರಾಜ್ಯಾದ್ಯಂತ ಪ್ರಥಮ ಬಾರಿಗೆ ಕಾರಾಗೃಹದಲ್ಲಿ ಆಚರಿಸಿರುವುದು ಸಂತಸದ ವಿಷಯ ಎಂದರು.

ಕಾರಾಗೃಹದಲ್ಲಿ ಉತ್ತಮ ವಾತಾವರಣ ನಿರ್ಮಾಣದ ಜೊತೆಗೆ ಸಹೋದ್ಯೋಗಿ ಸ್ನೇಹಿ ವಾತಾವರಣ ನಿರ್ಮಾಣವಾಗಬೇಕು. ಅಧಿಕಾರಿ, ಸಿಬ್ಬಂದಿ ಎಂಬ ಭೇದಭಾವವಿಲ್ಲದೆ ಎಲ್ಲರೂ ಒಂದೇ ಕುಟುಂಬ ಎಂದು ಕಾರ್ಯನಿರ್ವಹಿಸಿದರೆ ಸಾರ್ವಜನಿಕವಾಗಿ ಉತ್ತಮ ಸೇವೆ ನೀಡಲು ಸಾಧ್ಯ ಎಂದರು.

ಇದೇ ವೇಳೆ ಮಹಿಳಾ ಸಿಬ್ಬಂದಿ, ಅರಿಶಿಣ, ಕುಂಕುಮ ನೀಡುವುದರೊಂದಿಗೆ ತಲೆಗೆ ಹೂ ಮುಡಿಸಿ, ಮಡಿಲು ತುಂಬಿದರು. ನೆರೆದಿದ್ದ ಸಹೋದ್ಯೋಗಿ ಮಿತ್ರರು, ಶುಭವಾಗಲಿ ಎಂದು ಹಾರೈಸಿದರು.

Chikmagalur Jail  ಮಹಿಳಾ ಪೇದೆಯೊಬ್ಬರಿಗೆ ಸೀಮಂತ ಮಾಡುವ ಮೂಲಕ ಕಾರಾಗೃಹದಲ್ಲಿ ಕೌಟುಂಬಿಕ ಸಂಭ್ರಮದ ವಾತಾವರಣ ನಿರ್ಮಾಣಕ್ಕೆ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಸಹಕರಿಸಿದರು.

ಈ ಸಂದರ್ಭದಲ್ಲಿ ಕಾರಾಗೃಹದ ಜೈಲರ್ ಎಂ.ಕೆ.ನೆಲಧರಿ, ಅಧಿಕಾರಿಗಳಾದ ಅಲೀಮುದ್ದಿನ್, ವನಖಂಡೆ, ಬೊಂಗಾಳೆ, ಸಿಬ್ಬಂದಿಗಳಾದ ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.

ook Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...