Sunday, October 6, 2024
Sunday, October 6, 2024

Taxi Driver ಟ್ಯಾಕ್ಸಿ ಚಾಲಕರು ಪ್ರಯಾಣಿಕರೊಂದಿಗೆ ಉತ್ತಮ ಒಡನಾಟ ಹೊಂದಿರಬೇಕು- ನಿವೃತ್ತ ಯೋಧ ನಾಗಾರಾಜ್

Date:

Taxi Driver  ಟ್ಯಾಕ್ಸಿ ಚಾಲಕರು ವೃತ್ತಿ ಜೀವನದಲ್ಲಿ ಪ್ರಯಾಣಿಕರೊಂದಿಗೆ ಉತ್ತಮ ಒಡನಾಟ ಹಾಗೂ ಬಾಂಧವ್ಯವನ್ನು ಹೊಂದಿದರೆ ಮಾತ್ರ ಚಾಲನೆ ವೃತ್ತಿಯಲ್ಲಿ ಮುಂದುವರೆದು ಯಶಸ್ಸುಗಳಿಸಲು ಸಾಧ್ಯ ಎಂದು ನಿವೃತ್ತ ಯೋಧ ನಾಗರಾಜ್ ತೋರಣಮಾವು ಹೇಳಿದರು.

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಜೇಷನ್ ಜಿಲ್ಲಾ ಘಟಕದ 2ನೇ ವರ್ಷದ ವಾರ್ಷಿಕೋತ್ಸವ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಕಾರ್ಯ ಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Taxi Driver  ದೇಶಕ್ಕಾಗಿ ಹೋರಾಡುವ ಸೈನಿಕನ ಶಿಸ್ತನ್ನು ಚಾಲಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಯಾಣಿಕರೊಂದಿಗೆ ಚಾಲಕರು ಸನ್ನಡತೆ, ಸದ್ಬುಧಿ ಹಾಗೂ ಉತ್ತಮ ವ್ಯವಹಾರಗಳನ್ನು ಮಾಡಿಕೊಂಡಲ್ಲಿ ಮಾತ್ರ ಮುಂದಿನ ವೃತ್ತಿ ಜೀವನದಲ್ಲಿ ಹೆಸರು ಸಂಪಾದಿಸಬಹುದು ಎಂದು ಕಿವಿಮಾತು ಹೇಳಿದರು.

ಚಾಲನೆ ವೃತ್ತಿಯಲ್ಲಿರುವವರು ಪ್ರಯಾಣಿಕರಲ್ಲಿ ಯಾವುದೇ ಜಾತಿ, ಬೇಧ ಮಾಡದೇ ಕಾರ್ಯನಿರ್ವ ಹಿಸಬೇಕು. ಆಗ ಮಾತ್ರ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಆ ನಿಟ್ಟಿನಲ್ಲಿ ಚಾಲಕರು ತಮ್ಮ ವೃತ್ತಿಯನ್ನು ಗೌರವಿ ಸಿದಂತೆ ಪ್ರತಿಯೊಬ್ಬ ಪ್ರಯಾಣಿಕರನ್ನು ಗೌರವಿಸಿದಾಗ ಮಾತ್ರ ಯಶಸ್ಸು ಕಾಣಬಹುದು ಎಂದು ತಿಳಿಸಿದರು.

ಅರ್ಗನೈಜೇಷನ್ ರಾಜ್ಯಾಧ್ಯಕ್ಷ ರಮೇಶ್‌ಕುಮಾರ್ ಕುಂದಾಪುರ ಮಾತನಾಡಿ ಟ್ಯಾಕ್ಸಿ ಚಾಲಕರ ಬಳಗವು ಈಗಾಗಲೇ ರಾಜ್ಯಾದ್ಯಂತ ಸ್ಥಾಪನೆಯಾಗಿ ಅಧಿಕೃತವಾಗಿ 13 ಜಿಲ್ಲೆಗಳಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಂಘದಲ್ಲಿ ನೊಂದಣಿಯಾದ ಚಾಲಕರಿಗೆ ತುರ್ತು ಸಂದರ್ಭ ಎದುರಾದಲ್ಲಿ ಆಯಾ ಜಿಲ್ಲಾವಾರು ಸಂಘಗಳು ಸಹಾಯಕ್ಕೆ ಧಾವಿಸಿ ಸಮಸ್ಯೆ ಪರಿಹರಿಸುವ ಕಾರ್ಯ ಮಾಡಲಿವೆ ಎಂದು ತಿಳಿಸಿದರು.

ಇದೀಗ ವೈಟ್‌ಬೋರ್ಡ್ ಟ್ಯಾಕ್ಸಿಗಳ ಹಾವಳಿಗಳು ಪ್ರತಿಯೊಂದು ಜಿಲ್ಲೆಗಳಲ್ಲೂ ಹೆಚ್ಚಾಗಿರುವ ಕಾರಣ ಮುಂದಿನ ದಿನಗಳಲ್ಲಿ ನ್ಯಾಯಬದ್ಧ ಹೋರಾಟ ಮಾಡಲಾಗುತ್ತದೆ ಎಂದ ಅವರು ಎಲ್ಲಾ ಟ್ಯಾಕ್ಸಿ ಚಾಲಕರುಗಳು ಒಗ್ಗಟ್ಟಾಗಿ ಕೈಜೋಡಿಸಿದರೆ ವೈಟ್‌ಬೋರ್ಡ್ ಹಾವಳಿಯ ವಾಹನಗಳನ್ನು ನಿಯಂತ್ರಿಸಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅರ್ಗನೈಜೇಷನ್ ಜಿಲ್ಲಾಧ್ಯಕ್ಷ ಹೆಚ್.ಕೆ.ಪ್ರಕಾಶ್ ಕೆಟಿಡಿಓದಲ್ಲಿ ನೊಂದಣೀಯಾದಂತಹ ಚಾಲಕರಿಗೆ ಆಕಸ್ಮಿಕವಾಗಿ ಅಪಘಾತ ಅಥವಾ ಅಂಗವೈಫಲ್ಯಗಳಂತಹ ಸಮಸ್ಯೆ ಕಂಡು ಬಂದಲ್ಲಿ ಸರ್ವ ಸದಸ್ಯರುಗಳ ಸಹಕಾರದೊಂದಿಗೆ ಪರಿಹಾರ ವಿತರಣೆ ಮಾಡಲಾಗುತ್ತದೆ. ಜೊತೆಗೆ ಆರೋಗ್ಯ ಶಿಬಿರ, ನೇತ್ರ ತಪಾಸಣೆಯನ್ನು ನಡೆಸಿ ಚಾಲಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕೆಟಿಡಿಓ ಚಾಲಕರ ಕುಟುಂಬದವರಿಗೆ ಮನರಂಜನೆಯ ಸಲುವಾಗಿ ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಗುರಿ ಹೊಂದಲಾಗಿದೆ ಎಂದರು.

ಇದೇ ವೇಳೆ ಟ್ಯಾಕ್ಸಿ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಜೇಷನ್ ನೂತನ ಅಧ್ಯಕ್ಷರಾಗಿ ಪ್ರಕಾಶ್, ಉಪಾಧ್ಯಕ್ಷರಾಗಿ ಪಿಲಿಕ್ಸ್ ಪಿಂಟೋ, ಉಮೇಶ್, ಗೌರವಾಧ್ಯಕ್ಷ ಸುಂದ್ರೇಶ್, ಕಾರ್ಯದರ್ಶಿ ಗಿರೀಶ್, ಸಹ ಕಾರ್ಯದರ್ಶಿಗಳಾಗಿ ಆರ್.ರವಿ, ಹರ್ಷದ್, ಕೋಶಾಧಿಕಾರಿ ಕಿಶೋರ್, ಸಹ ಕೋಶಾಧಿಕಾರಿ ಮಂಜು, ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಡಿಸೋಜ, ಕ್ರೀಡಾ ಕಾರ್ಯದರ್ಶಿ ಉಮೇಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉಮೇಶ್ ಶೃಂಗೇರಿ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಯೋಧ ರೇವಣ್ಣ, ಅರ್ಗನೈಜೇಷನ್ ಗೌರವಾಧ್ಯಕ್ಷ ಸುಂದ್ರೇಶ್, ಕಾರ್ಯದರ್ಶಿ ಗಿರೀಶ್, ಕೋಶಾಧಿಕಾರಿ ಕಿಶೋರ್ ಹಾಗೂ ಹಾಸನ ಮತ್ತು ಉಡುಪಿ ಜಿಲ್ಲಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...