Corruption ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದಾರೆ. ಅವರ ಎರಡು ಮನೆಗಳಲ್ಲಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು 6.26 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಆರಂಭಿಕ ಹಂತದ ಕಾರ್ಯಾಚರಣೆಯಲ್ಲಿ 2.02 ಕೋಟಿ ರೂಪಾಯಿ ನಗದು ಹಣ ವಶ ಪಡೆಯಲಾಗಿತ್ತು.
ಒಟ್ಟು 8.28 ಕೋಟಿ ರೂಪಾಯಿ ನಗದನ್ನು ಲೋಕಾಯುಕ್ತ ಪೊಲೀಸರು ವರ್ಷಕ್ಕೆ ಪಡೆದುಕೊಂಡಿದ್ದಾರೆ.
ಕೆಎಸ್ಡಿಎಲ್ಗೆ ರಾಸಾಯನಿಕ ಪೂರೈಕೆ ಟೆಂಡರ್ ಪ್ರಕ್ರಿಯೆಯಲ್ಲಿ ಖರೀದಿ ಆದೇಶ ನೀಡಲು ಎರಡು ಕಂಪನಿಗಳಿಂದ 40 ಲಕ್ಷ ಲಂಚ ಪಡೆಯುತ್ತಿದ್ದ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
Corruption ದಾವಣಗೆರೆ ಲೋಕಾಯುಕ್ತ ಎಸ್ ಪಿ ಎಂ ಎಸ್ ಕೌಲಾಪುರೆ ಇತರ ಐದು ಅಧಿಕಾರಿಗಳ ನೇತೃತ್ವದಲ್ಲಿ ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 20 ಕ್ಕೂ ಅಧಿಕ ಅಧಿಕಾರಿಗಳ ತಂಡ ಶಾಸಕರ ಒಡೆತನದ ತಾಲೂಕಿನ ಚನ್ನೇಶಪುರ ನಿವಾಸ, ಮಾವಿನ ಹೊಳೆಯಲ್ಲಿರುವ ಜಲ್ಲಿ ಕ್ರಷರ್, ಕಚೇರಿ ಮತ್ತು ಮಾವಿನಕಾಯಿ ತೋಟದ ಮನೆಗಳಲ್ಲಿ ಒಂದೂವರೆ ಗಂಟೆಗೂ ಅಧಿಕಕಾಲ ಶೋಧ ನಡೆಸಿದ್ದಾರೆ. ನಾಲ್ಕು ಬ್ಯಾಗ್ಗಳಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿಕೊಂಡಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.