ದೇಶದ ಮೂರು ರಾಜ್ಯಗಳಲ್ಲಿ ಎನ್ ಸಿಬಿ ಕಾರ್ಯಾಚರಣೆ ನಡೆಸಿದೆ. ನಿಮಗೆ ಅಚ್ಚರಿಯಾಗಬಹುದು. ನಾವು ತಿನ್ನುವ ಚಾಕ್ಲೇಟ್, ಚೂಯಿಂಗ್ ಗಮ್, ಹಾಗೂ ನೆಟ್ಟು ಬೆಳೆಸುವ ತೆಂಗಿನ ಸಸಿ ಗಳಲ್ಲಿ ಬಚ್ಚಿಟ್ಟು ಸಾಗಿಸಲಾಗು ತ್ತಿದೆ.
ಕರ್ನಾಟಕ, ಆಂಧ್ರ ಪ್ರದೇಶ, ಮತ್ತು ಕೇರಳ ರಾಜ್ಯಗಳ ನಡೆಸಿದ ಡ್ರಗ್ಸ್ ಪತ್ತೆ ಕಾರ್ಯಾಚರಣೆ ಇದು ಕಂಡುಬಂದಿದೆ.
ಬೆಂಗಳೂರಿನಲ್ಲಿ ದೊರೆತ ಪ್ರಾಥಮಿಕ ಮಾಹಿತಿಯನ್ನು ಆಧರಿಸಿ ಮೂರು ರಾಜ್ಯಗಳಲ್ಲಿ ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಿಂದ ತಿರುವಂತಪುರ ಕ್ಕೆ ಪಾರ್ಸೆಲ್ ಮೂಲಕ ಡ್ರಗ್ಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತಿರುವನಂತಪುರಂದಲ್ಲಿ ಪಾರ್ಸೆಲ್ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿದೆ. ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ತಿಳಿಸಿದ್ದಾರೆ.
244 ಗ್ರಾಂ ಆಂಫೆಟಮೈನ್ , 25 ಎಲ್ ಎಸ್ ಡಿ ಕಾಗದ ಚೂರುಗಳು, 2 ಗ್ರಾಂ ಮೆಥಾಂಫೆಟಮೈನ್ , 44ಗ್ರಾಂ ಮೆಥಾಂಕ್ಯುಮೈನ್ , ಮತ್ತು 212 ಕೆ.ಜಿ 500 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ಎನ್ ಸಿಬಿ ನಿರ್ದೇಶಕ ತಿಳಿಸಿದ್ದಾರೆ.
ಚಾಕ್ಲೇಟ್, ಚೂಯಿಂಗ್ ಗಮ್, ತೆಂಗಿನಕಾಯಿ ಸಸಿಗಳಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಿಸಿದ ಆರು ಜನರನ್ನು ಬಂಧಿಸಲಾಗಿದೆ.
ತಮಿಳುನಾಡು ಮತ್ತು ಕೇರಳದಲ್ಲಿ ಹಲವು ದಿನಗಳಿಂದ ಮಳೆ ಬೀಳುತ್ತಿದೆ.ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪೆಡ್ಲರ್ ಗಳು ಡ್ರಗ್ಸ್ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಪೆಡ್ಲರ್ ಗಳು ತಮ್ಮದೇ ಆದ ಗ್ಯಾಂಗ್ ಮೂಲಕ ಡ್ರಗ್ಸ್ ಸಾಗಣಿಕೆ ಮಾಡುತ್ತಿದ್ದರು. ಈ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಹೆಚ್ಚುವರಿ ತನಿಖೆ ಮುಂದುವರಿಯುತ್ತಿದೆ ಎಂದು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.