Friday, April 10, 2026
Friday, April 10, 2026

Blindness Prevention ಅಂಧತ್ವಕ್ಕೆ ಮೂಲಕಾರಣ ಅಪೌಷ್ಢಿಕತೆ-ಡಾ.ಕೆ.ಸುಂದರಗೌಡ

Date:

Blindness Prevention ಚಿಕ್ಕಮಗಳೂರಿನ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕಣ್ಣಿನ ಪೊರೆ ಸೇರಿದಂತೆ ಇತರೆ ಆರೋಗ್ಯದ ಸಮಸ್ಯೆ ಉದ್ಬವಿಸದಂತೆ ಮುಂಜಾಗ್ರತಾ ವಹಿಸುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗ್ರಾಮದಲ್ಲಿ ಆಯೋಜಿಸಿ ಸ್ಪಂದಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಎಎಪಿ ರಾಜ್ಯ ಜಂಟಿ ಕಾರ್ಯ ದರ್ಶಿ ಡಾ|| ಕೆ.ಸುಂದರಗೌಡ ಹೇಳಿದರು.

ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮದ ಕನಕ ಸಮುದಾಯ ಭವನದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಎಎಪಿ ಜಿಲ್ಲಾ ಘಟಕ ಹಾಗೂ ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಬಿಕ್ಕೆಮನೆ ಇವರ ಸಂಯು ಕ್ತಾಶ್ರದಯಲ್ಲಿ ನಡೆದ ಉಚಿತ ನೇತ್ರ, ಕಿವಿ, ಮೂಗು, ಗಂಟಲು ಹಾಗೂ ದಂತ ಕ್ಷಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

Blindness Prevention ಪ್ರಸ್ತುತ ದೇಶದಲ್ಲಿ ಸುಮಾರು 80 ಲಕ್ಷ ಮಂದಿ ಅಂಧತ್ವದಿಂದ ನರಳುತ್ತಿದ್ದು ಇದಕ್ಕೆ ಮೂಲ ಕಾರಣ ಅಪೌಷ್ಟಿಕತೆ, ಕಣ್ಣಿನ ಪೊರೆ ಅಥವಾ ಜನನ ಸಮಯದಲ್ಲಿ ಕೆಲವೊಂದು ಸಮಸ್ಯೆಯಿಂದ ಅಂಧತ್ವನ್ನು ಹೊಂದುತ್ತಾರೆ. ಅವರನ್ನು ಯಾವುದೇ ಕಾರಣಕ್ಕೂ ಸಮಾಜದಲ್ಲಿ ನಿರ್ಲಕ್ಷ್ಯ ವಹಿಸದೇ ಪರಿವರ್ತನೆ ಮಾಡುವ ಕಾರ್ಯದಲ್ಲಿ ಮುಂದಾಗಬೇಕು ಎಂದು ಸಲಹೆ ಮಾಡಿದರು.

ಇತ್ತೀಚೆಗೆ ದಿನಗಳಲ್ಲಿ ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ ವಯೋವೃದ್ದರ ನಿರ್ಲಕ್ಷ್ಯತನ ಅಥವಾ ಮನೆಯಲ್ಲಿ ಆರ್ಥಿಕ ಸಮಸ್ಯೆಯಿಂದ ನೇತ್ರ ಸೇರಿದಂತೆ ಯಾವುದೇ ಆರೋಗ್ಯ ತಪಾಸಣೆಗೊಳಪಡಿಸಿಕೊಳ್ಳುವುದಿಲ್ಲ. ಇಂದಿನ ಯುವಪೀಳಿಗೆಯು ಕೂಡಾ ಹಿರಿಯ ವೃದ್ದರಿಗೆ ಸೂಕ್ತ ತಪಾಸಣೆ ನಡೆಸದೇ ಅಸಡ್ಡೆ ತೋರುತ್ತಿದ್ದು ಅಂತಹ ವ್ಯಕ್ತಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮದಲ್ಲಿ ಶಿಬಿರ ಆಯೋಜಿಸಿದ್ದು ಪ್ರತಿಯೊಬ್ಬರು ಸದ್ಬಳಕೆ ಮಾಡಿ ಕೊಳ್ಳಬೇಕು ಎಂದರು.

ಸಮಾಜದ ನಾಗರೀಕರು ಸೇವಾ ಮನೋಭಾವನ್ನು ಹೊಂದಬೇಕು. ಜೀವನದಲ್ಲಿ ಗಳಿಸಿರುವ ದುಡಿಮೆಯ ಲ್ಲಿ ಶೇ.10ರಷ್ಟನ್ನು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಲು ಮುಂದಾದರೆ ಒಂದೊಂದೇ ಆರ್ಥಿಕ ಸಂಕಷ್ಟದಲ್ಲಿರುವ ವ್ಯಕ್ತಿಗಳ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಿದ್ದಲ್ಲಿ ಅಂಧತ್ವವನ್ನು ನಿವಾರಣೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಚಂದ್ರೇಗೌಡ ಮಾತನಾಡಿ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಉಚಿತ ಶಿಬಿರವನ್ನು ಗ್ರಾಮದಲ್ಲಿ ಆಚರಿಸುತ್ತಿರುವುದು ಖುಷಿಯ ಸಂಗತಿ. ಜೊತೆಗೆ ಚಿಕ್ಕಗೌಜ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಶಿಬಿರದಲ್ಲಿ ಸುಮಾರು 750 ಮಂದಿ ತಪಾಸಣೆಗೊಳಪಡಿಸಿಕೊಂಡಿದ್ದು ಕಣ್ಣಿನ ಗ್ಲಾಕೋಮಾ ಎಂಬ ಕಾಯಿಲೆಯಿಂದ ಬಳಲುತ್ತಿರುವ 10 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಕಳಿಸಿಕೊಡುವ ವ್ಯವಸ್ಥೆ ಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್, ಕಾರ್ಯದರ್ಶಿ ಅಂತೋಣ , ಆಕಾಂಕ್ಷಿ ಈರೇಗೌಡ, ಮುಖಂಡರುಗಳಾದ ಲಿಂಗಾರಾಧ್ಯ, ಶಿವೇಗೌಡ, ನಾಗರಾಜ್, ಜಯಣ್ಣ, ನಾಸಿರ್ ಬೇಗಂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...