Thursday, October 3, 2024
Thursday, October 3, 2024

Dr. Sarji shimogga ಬಿಜೆಪಿ ಪ್ರಣಾಳಿಕೆಗೆ ಸಾರ್ವಜನಿಕರು ಸಲಹೆ ನೀಡಲು ಮನವಿ-ಡಾ.ಸರ್ಜಿ

Date:

Dr. Sarji shimogga  ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಪ್ರಣಾಳಿಕೆ ಸಿದ್ಧಪಡಿಸುವಂತ ಅತ್ಯಂತ ಪ್ರಬುದ್ಧರು ಭಾರತೀಯ ಜನತಾ ಪಾರ್ಟಿಯಲ್ಲಿದ್ದಾರೆ, ಆದರೆ, ಜನಸಾಮಾನ್ಯ ರಿಂದಲೇ ಪಡೆಯುವ ಸದುದ್ದೇಶ ಹೊಂದಿ ಪ್ರಣಾಳಿಕೆ ಸಲಹಾ ಸಂಗ್ರಹ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ, ಇದಕ್ಕೆ ಜನತೆ ಸಂಪೂರ್ಣವಾಗಿ ಸ್ಪಂದಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಣಾಳಿಕೆ ಸಲಹಾ ಸಮಿತಿಯ ಜಿಲ್ಲಾ ಸಂಚಾಲಕರಾದ ಡಾ.ಧನಂಜಯ ಸರ್ಜಿ ಮನವಿ ಮಾಡಿದರು.

Dr. Sarji shimogga  ತೀರ್ಥಹಳ್ಳಿ ಟಿಎಪಿಸಿಎಂಎಸ್‌ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರಣಾಳಿಕೆ ಸಲಹೆ ಮತ್ತು ಸಂಗ್ರಹಣಾ ಸಭೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಅಟಲ್‌ ಬಿಹಾರಿ ವಾಜಪೇಯಿ ಅವರು ಅಷ್ಟೊಂದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೂ ನಾವು ಸರಿಯಾಗಿ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಲಿಲ್ಲ. ಈಗ ಬಿಜೆಪಿ ಡಬಲ್‌ ಎಂಜಿನ್‌ ಸರಕಾರ ಕೈಗೊಂಡಂತಹ ಮಹತ್ತರ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಪ್ರಣಾಳಿಕೆಗೆ ಸಲಹೆ ಪಡೆಯುವಂತಹ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಆಯಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯಾ ಕಟ್ಟಿನ ಜಾಗಗಳಲ್ಲಿ ಪ್ರಣಾಳಿಕೆ ಬಾಕ್ಸ್ ಗಳನ್ನು ಅಳವಡಿಸಲಾಗುವುದು. ದೇವಸ್ಥಾನ, ಮಾರುಕಟ್ಟೆ ಹಾಗೂ ಜನ ಸಂದಣಿ ಪ್ರದೇಶಗಳಲ್ಲಿ ಕ್ಯೂಆರ್‌ ಕೋಡ್‌ ಹೊಂದಿದ ಬಾಕ್ಸ್ ಅಳವಡಿಸುತ್ತಿದ್ದು, ಜನರು ಬೂತ್‌, ವಾರ್ಡ್‌ ಮಟ್ಟದಲ್ಲಿ ಪ್ರಣಾಳಿಕೆಗೆ ಸಲಹೆ ನೀಡಬೇಕು ಎಂದು ಮನವಿ ಮಾಡಿದರು.

ಕೋವಿಡ್‌ ಸಂದರ್ಭ 1ಲಕ್ಷದ 92 ಸಾವಿರ ವಿಮಾನಗಳನ್ನು ಹಾರಾಟ ಮಾಡಿಸಿ, ಭಾರತದಿಂದ ಹೊರ ಹೋಗಿದ್ದ ಒಂದು ಕೋಟಿ 90 ಲಕ್ಷ ಜನರನ್ನು ಸುರಕ್ಷಿತವಾಗಿ ಕರೆ ತಂದವರು ಮೋದಿಜೀ ಅವರು. ಬೇರೆ ದೇಶಗಳಿಂದ ಕೋವಿಡ್‌ ವ್ಯಾಕ್ಸಿನ್‌ನ್ನು ಸಾಲವಾಗಿ ಪಡೆಯಲಾಗುತ್ತಿತ್ತು. ಅಂತಹ ಸಂದರ್ಭ 250 ಕೋಟಿ ಡೋಸ್‌ನ್ನು ಪ್ರತಿಯೊಬ್ಬರಿಗೂ ಉಚಿತವಾಗಿ ಕೊಟ್ಟು 100 ಬೇರೆ ದೇಶಗಳಿಗೆ ಉಚಿತವಾಗಿ ವ್ಯಾಕ್ಸಿನೇಷನ್‌ ನ್ನು ನೀಡುವ ಮೂಲಕ ಭಾರತಕ್ಕೆ ಶಕ್ತಿ ತುಂಬಿದ್ದು ಬಿಜೆಪಿ ಸರಕಾರ. ಮೊದಲು ವೈದ್ಯರು, ದಾದಿಯರಿಗೆ ವ್ಯಾಕ್ಸಿನ್‌ ನೀಡಿ ಜನ ಸೇವೆಗೆ ಅನುಕೂಲ ಮಾಡಿಕೊಟ್ಟಿದ್ದು ಹೆಮ್ಮೆಯ ಸಂಗತಿ ಎಂದರು.

ಯಾವುದೇ ಕ್ಷೇತ್ರ ಅಭಿವೃದ್ಧಿ ಆಗಬೇಕೆಂದರೆ ಮೂಲ ಸೌಕರ್ಯಗಳು ದೊರೆಯಬೇಕು, ಅದರಲ್ಲೂ ಸಂಪರ್ಕ ವ್ಯವಸ್ಥೆ ಚೆನ್ನಾಗಿ ಆಗಬೇಕು. ಈ ನಿಟ್ಟಿನಲ್ಲಿ ಪ್ರತಿ ಕ್ಷೇತ್ರದಲ್ಲೂ ಸಂಪರ್ಕ ಕ್ರಾಂತಿ ಆಗಿದೆ. ಒಟ್ಟು 7500 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗಿದೆ. 1150 ಕೋಟಿ ರೂ.ವೆಚ್ಚದಲ್ಲಿ ರೈಲ್ವೆ ಅಭಿವೃದ್ಧಿ ನಮ್ಮ ಜಿಲ್ಲೆಯಲ್ಲಾಗಿದೆ. 2014ಕ್ಕೆ ಮೊದಲು ಒಂದು 11.3 ಕಿ.ಮೀ. ಹೈವೇ ಆಗ್ತಿತ್ತು, ಇವತ್ತು ಒಂದು ದಿನಕ್ಕೆ 33.6 ಕಿ.ಮೀ ಹೈವೇ ಅಭಿವೃದ್ಧಿಯಾಗುತ್ತಿದೆ, ಇದು ಅಭಿವೃದ್ಧಿಯ ವೇಗಕ್ಕೆ ಸಾಕ್ಷಿಯಾಗಿದೆ ಎಂದರು.

ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಬಿಜೆಪಿ ಜಿಲ್ಲಾ ಪ್ರಣಾಳಿಕೆ ಸಲಹಾ ಸಮಿತಿಯ ಸಹ ಸಂಚಾಲಕರಾದ ಸಂದೇಶ್‌ ಜವಳಿ, ಮಂಡಲ ಅಧ್ಯಕ್ಷರಾದ ಬಾಳೇಬೈಲು ರಾಘವೇಂದ್ರ ನಾಯಕ್‌ ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...