Friday, April 10, 2026
Friday, April 10, 2026

C. T. Ravi ಸಿ.ಟಿ‌.ರವಿ‌ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ವ್ಯಾಪಕ ಅಸಮಾಧಾನ

Date:

C. T. Ravi ಸತತವಾಗಿ ಕ್ಷೇತ್ರದಲ್ಲಿ 4 ಬಾರಿ ವೀರಶೈವ ಲಿಂಗಾಯಿತ ಸಮು ದಾಯದ ಸಹಕಾರದೊಂದಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಸಿ.ಟಿ.ರವಿ ಅವರು ಇದೀಗ ಜನಾಂಗದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿಕೆ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ತಾಲ್ಲೂಕು ಸಂಚಾಲಕ ಯು.ಎಸ್.ಹೇಮಂತ್‌ಕುಮಾರ್ ಖಂಡಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಲಿಂಗಾಯಿತ ಸಮುದಾಯವು ಬಿಜೆಪಿಯಿಂದ ದೂರ ಸರಿಯುತ್ತಿದೆ. ಈ ಸಮುದಾಯದ ನಾಯಕರಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ. ಹಾಗೂ ಯಡಿಯೂರಪ್ಪ ನವರು ಸಹ ಹೈಕಮಾಂಡ್ ಆದೇಶವನ್ನು ಪಾಲಿಸಬೇಕು ಎಂದು ಅವಹೇಳನಕಾರಿ ಹೇಳಿಕೆ ನೀಡಿ ಸಮುದಾಯ ವನ್ನು ನಿಂದಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದಿದ್ದಾರೆ.

ಸಮುದಾಯದ ನಾಯಕ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಬಳಸಿಕೊಂಡು ಇಪ್ಪತ್ತು ವರ್ಷಗಳ ಕಾಲ ಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯವನ್ನು ಓಲೈಸಿ ಮತ ಪಡೆದುಕೊಂಡು ಈಗ ಆ ಸಮುದಾ ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಸರಿಯೇ ಎಂದ ಅವರು ಇದೇ ರೀತಿ ಮುಂದುವರೆದಲ್ಲಿ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯವು ಬಿಜೆಪಿಯನ್ನು ಪರಾಭವಗೊಳಿಸಲು ಸನ್ನದ್ದರಾಗವಾಗಲಿದೆ ಎಂದಿದ್ದಾರೆ.

C. T. Ravi ಶಾಸಕ ರವಿಯವರು ಪಕ್ಷನಿಷ್ಟೆಯಿಂದ ಎಲ್ಲವನ್ನು ನಿಭಾಯಿಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದಂತಹ ವೀರಶೈವ ಸಮುದಾಯವನ್ನು ತುಳಿಯುವ ಹೇಳಿಕೆ ನೀಡ ನೀಡಿರುವುದು ನಿಮ್ಮ ಸಂಸ್ಕೃತಿಯೇ. ರಾಜಕೀಯವಾಗಿ ಬೆಳೆಯುವ ಸಂದರ್ಭದಲ್ಲಿ ಸಮುದಾಯವನ್ನು ಬಳಸಿಕೊಂಡು ಇದೀಗ ಬೆಳೆದ ನಂತರ ಆ ಜನಾಂಗಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದಿದ್ದಾರೆ.

ಕೂಡಲೇ ಶಾಸಕ ಸಿ.ಟಿ.ರವಿ ಅವರು ವೀರಶೈವ ಸಮುದಾಯ ಹಾಗೂ ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದ ಬಹುಸಂಖ್ಯಾತ ಲಿಂಗಾಯಿತ ಸಮುದಾಯವು ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...