ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮನವಿ ಮಾಡಿದ್ದಾರೆ.
ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ವಾಂತಿ ಬೇಧಿ ಉಂಟಾದಾಗ ಡಿ ಹೈಡ್ರೇಷನ್ ಆಗುವುದರಿಂದ ತಕ್ಷಣ ಚಿಕಿತ್ಸೆಯನ್ನು ಮನೆಯಲ್ಲಿಯೇ ಪ್ರಾರಂಭಿಸಬೇಕು. ಒಂದು ಲೀಟಲ್ ಶುದ್ಧವಾದ ನೀರಿಗೆ ಒಂದು ಚಮಚ ಉಪ್ಪು ಮತ್ತು 8 ಚಮಚ ಸಕ್ಕರೆ ದ್ರಾವಣ ತಯಾರಿಸಿ ಆಸ್ಪತ್ರೆಗೆ ಹೋಗುವವರಿಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು ಎಂದು ತಿಳಿಸಿದರು.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರಿಂದ ಪ್ರತಿ ಮನೆಗೆ ಭೇಟಿ ನೀಡಿ ಕ್ರಿಮಿ, ಜ್ವರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾವಹಿಸಲು ಎಲ್ಲಾ ಆರೋಗ್ಯ ಕಾರ್ಯಕರ್ತರ ವಾಟ್ಸಪ್ ಗ್ರೂಪ್ ಗಳನ್ನು ರಚಿಸಲಾಗಿದೆ. ಪ್ರತಿ ದಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ರಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ ಡೆಂಗ್ಯೂ 381, ಚಿಕನ್ ಗುನ್ಯಾ 169, ಮಲೇರಿಯಾ 2, ಇಲಿಜ್ವರ 22, ಮತ್ತು ಮಂಗನಕಾಯಿಲೆ 13 ಪ್ರಕರಣಗಳು ಪತ್ತೆಯಾಗಿವೆ ಎಂದು ಅವರ ಪತ್ರಿಕಾ ಪ್ರಕಟಣೆ ತಿಳಿಸಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.