Tuesday, March 11, 2025
Tuesday, March 11, 2025

S P Office Shivamogga ಕೈಗಾರಿಕಾ ಸುರಕ್ಷತೆ ದೃಷ್ಟಿಯಿಂದ ಉದ್ಯಮಿಗಳು ಎಲ್ಲಾ ಕ್ರಮಗಳನ್ನ ಅನುಸರಿಸಬೇಕು- ಮಿಥುನ್ ಕುಮಾರ್

Date:

S P Office Shivamogga  ಕೈಗಾರಿಕಾ ಪ್ರದೇಶದಲ್ಲಿ ಸುರಕ್ಷತೆ ದೃಷ್ಠಿಯಿಂದ ಉದ್ಯಮಿಗಳು ಎಲ್ಲ ರೀತಿ ಅಗತ್ಯ ಕ್ರಮಗಳನ್ನು ಅನುಸರಿಸಬೇಕು. ಪೊಲೀಸ್‌ ಇಲಾಖೆಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಅವರು ಹೇಳಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಕೈಗಾರಿಕೋದ್ಯಮಿಗಳ ಸಂವಾದ “ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೈಗಾರಿಕಾ ಪ್ರದೇಶವು ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡುವ ಮೂಲಕ ಜೀವನ ರೂಪಿಸಿಕೊಳ್ಳುವಂತೆ ಮಾಡಿದೆ. ಎಲ್ಲ ಉದ್ಯಮಿಗಳ ಸೇವೆಯು ಸಾರ್ಥಕತೆಯಿಂದ ಕೂಡಿದೆ. ಶಿವಮೊಗ್ಗ ಜಿಲ್ಲೆಯ ಆರ್ಥಿಕ ಶಕ್ತಿ ಸಾಮಾರ್ಥ್ಯ ವೃದ್ಧಿಸುವಲ್ಲಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಕೊಡುಗೆ ಇದೆ ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುರಕ್ಷತೆ ದೃಷ್ಠಿಯಿಂದ ಯಾವುದೇ ಮಾಹಿತಿ, ಘಟನೆ ನಡೆದರೂ ಪೊಲೀಸ್‌ ಇಲಾಖೆ ಗಮನಕ್ಕೆ ತರಬೇಕು. ತುರ್ತು ಸಂದರ್ಭಗಳಲ್ಲಿ ಹತ್ತಿರದ ಠಾಣೆಯ ಸಂಖ್ಯೆ ಅಥವಾ 112 ಕ್ಕೆ ಕರೆ ಮಾಡಿ ಕೂಡಲೇ ಮಾಹಿತಿ ನೀಡಬೇಕು. ಅಪರಾಧ ಕೃತ್ಯಗಳನ್ನು ನಿಯಂತ್ರಿಸುವ ದೃಷ್ಠಿಯಿಂದ ಪೊಲೀಸ್‌ ಇಲಾಖೆ ಸಂಪೂರ್ಣ ಕ್ರಮ ವಹಿಸಲಿದೆ ಎಂದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸಂಸ್ಥೆಯ ಅಧ್ಯಕ್ಷ ಎಂ.ಎ.ರಮೇಶ್‌ ಹೆಗ್ಡೆ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕೆಲಸಗಾರರು ಓಡಾಟ ಮಾಡುವುದರಿಂದ ಪೊಲೀಸ್‌ ಔಟ್‌ ಪೋಸ್ಟ್‌ ಅವಶ್ಯಕತೆ ಇದೆ. ಈ ಬಗ್ಗೆ ಗೃಹ ಸಚಿವರ ಗಮನಕ್ಕೂ ತರಲಾಗಿದೆ. ಮುಂದಿನ ದಿನಗಳಲ್ಲಿ ಶೀಘ್ರ ಪೊಲೀಸ್‌ ಔಟ್‌ ಪೋಸ್ಟ್‌ ತೆರೆಯಲು ಕ್ರಮ ವಹಿಸಬೇಕು ಎಂದು ಹೇಳಿದರು.

S P Office Shivamogga  ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಕೈಗಾರಿಕಾ ಪ್ರದೇಶದ ಚಲನವಲನಗಳ ಬಗ್ಗೆ ಗಮನ ಹರಿಸಲಾಗುತ್ತಿದೆ. ಅಪರಾಧ ಕೃತ್ಯಗಳ ನಿಯಂತ್ರಣ ದೃಷ್ಠಿಯಿಂದ ಸಿಸಿ ಕ್ಯಾಮೆರಾ ಅಳವಡಿಸಿರುವುದು ಉಪಯುಕ್ತವಾಗಲಿದೆ. ಕೈಗಾರಿಕಾ ಉದ್ಯಮಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸಂಸ್ಥೆಯ ಕಾರ್ಯದರ್ಶಿ ಕಿರಣ್‌ ಕುಮಾರ್‌, ನಿರ್ದೇಶಕ ಕೆ.ವಿ.ನಾರಾಯಣ, ಡಿ.ಜಿ.ಬೆನಕಪ್ಪ, ಪರಮಶೇಖರ್‌, ಎಂ.ರಾಜು, ಎಂ.ಎನ್‌.ಸುರೇಶ್‌, ಡಿ.ಬಿ.ಅಶೋಕ್‌, ವಿಶ್ವೇಶ್ವರಯ್ಯ, ನಂದನ್‌, ಜೈಕರ್‌, ಶಾಂತಪ್ಪ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...