Wednesday, May 6, 2026
Wednesday, May 6, 2026

Shivamogga DC Office ವಾಹನಗಳಲ್ಲಿ ಧ್ವನಿವರ್ಧಕ ಬಳಕೆ ಮತ್ತು ಸಾರ್ವಜನಿಕವಾಗಿ ಪಟಾಕಿ ಸಿಡಿಸಲು ಜಿಲ್ಲಾಡಳಿತದ ಪರವಾನಗಿ ಪಡೆಯಬೇಕು

Date:

Shivamogga DC Office ಸಕ್ಷಮ ಪ್ರಾಧಿಕಾರದಿಂದ ಲಿಖಿತ ಅನುಮತಿ ಪಡೆಯದೆ ಸ್ಥಿರ ಅಥವಾ ಚಲಿಸುತ್ತಿರುವ ವಾಹನಗಳಿಗೆ ಅಳವಡಿಸಿರುವ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸಬಾರದು ಹಾಗೂ ಪಟಾಕಿಯನ್ನು ಸಿಡಿಸಬಾರದು. ಇದರ ಉಲ್ಲಂಘನೆ ಅಪರಾಧವಾಗಿದ್ದು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಸಭಾಂಗಣ, ಕಾನ್ಫರೆನ್ಸ್ ಕೊಠಡಿ, ಕಮ್ಯುನಿಟಿ ಸಭಾಂಗಣ ಅಥವಾ ಸಾರ್ವಜನಿಕ ತುರ್ತು ಹೊರತುಪಡಿಸಿ ರಾತ್ರಿ ವೇಳೆ ಧ್ವನಿವರ್ಧಕಗಳು, ಪಟಾಕಿಗಳು, ಶಬ್ದ ತರುವ ಸಾಧನಗಳು ಅಥವಾ ಸಂಗೀತ ಸಾಧನಗಳನ್ನು ಬಳಸುವಂತಿಲ್ಲ.

Shivamogga DC Office ಮೌನ ವಲಯ(ಸೈಲೆನ್ಸ್ ಝೋನ್) ಅಥವಾ ವಸತಿ ಪ್ರದೇಶಗಳಲ್ಲಿ ರಾತ್ರಿ ವೇಳೆ ವಾಹನಗಳ ಹಾರ್ನ್ ಶಬ್ದ ಮಾಡುವುದು ಅಥವಾ ಪಟಾಕಿ ಸಿಡಿಸುವುದು ಅಥವಾ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಮತದಾನ ಮುಕ್ತಾಯವಾಗುವ 48 ಗಂಟೆಗಳ ಹಿಂದೆ ಮತ್ತು ಮತ ಎಣಿಕೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳು/ಪೊಲೀಸ್ ಉಪಾಧೀಕ್ಷಕರ ಅನುಮತಿ ಇಲ್ಲದೆ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುಂತಿಲ್ಲ.

ಇದರ ಉಲ್ಲಂಘನೆ ಅಪರಾಧವಾಗಿದ್ದು, ಇದರಿಂದಾಗಿ ಯಾವುದೇ ರೀತಿಯ ಹಾನಿ, ತೊಂದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದಲ್ಲಿ ಕಾನೂನಿನ ರೀತ್ಯಾ ಕ್ರಮ ಜರುಗಿಸಲಾಗುವುದು. ಹಾಗೂ ಈ ಆದೇಶದ ಉಲ್ಲಂಘನೆಯಿಂದ ಯಾವುದೇ ವ್ಯಕ್ತಿ ಅಥವಾ ಮಾನವ ಜೀವನ, ಆರೋಗ್ಯ ಮತ್ತು ಸುರಕ್ಷತೆಗೆ ಹಾನಿ, ತೊಂದರೆ, ಅಡ್ಡಿ, ಗಾಯ ಉಂಟಾದಲ್ಲಿ ಅಥವಾ ಗಲಭೆ, ಗಲಾಟೆ ಉಂಟಾದಲ್ಲಿ ಐಪಿಸಿ ಸೆಕ್ಷನ್ 188 ರನ್ವಯ ಕ್ರಮ ಕೈಗೊಳ್ಳಲಾಗುವುದು.

ಈ ಆದೇಶವು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಇಡೀ ಜಿಲ್ಲೆಗೆ ಅನ್ವಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...