Sunday, August 23, 2026
Sunday, August 23, 2026

Ramzan Festival ರಂಜಾನ್ ಹಿನ್ನೆಲೆಯಲ್ಲಿ ಬಡವರಿಗೆ ದಿನಸಿ ಕಿಟ್ ವಿತರಣೆ

Date:

Ramzan Festiva ಪವಿತ್ರ ಹಬ್ಬದ ರಂಜಾನ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಗೌರಿಕಾಲುವೆಯ ನೂರಾನಿ ಮಸೀದಿಯಲ್ಲಿ ನೂರಾನಿ ನೌಜವಾನ್ ಚಾರಿಟೇಬಲ್ ವತಿಯಿಂದ ಮುಸ್ಲಿಂ ಸಮುದಾ ಯದ ಬಡವರ್ಗದವರಿಗೆ ಹಬ್ಬದ ಪ್ರಯುಕ್ತ ದಿನಸಿ ಕಿಟ್ ವಿತರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಚಾರಿಟೇಬಲ್ ಅಧ್ಯಕ್ಷ ನೂರ್ ಮೊಹಮ್ಮದ್ ಪ್ರತಿಯೊಬ್ಬ ಮುಸ್ಲೀಂ ಬಾಂಧವರಿಗೆ ರಂಜಾನ್ ಪವಿತ್ರ ಹಬ್ಬವಾಗಿದೆ. ಕೆಲವು ಮಂದಿ ಆರ್ಥಿಕವಾಗಿ ಸದೃಢರಾಗಿರದ ಕುಟುಂಬಗಳಿಗೆ ಹಬ್ಬ ಆಚರಣೆ ಗಾಗಿ ಸಿ.ಎನ್.ಅಕ್ಮಲ್ ಅವರ ಸಹಯೋಗದಲ್ಲಿ ದಿನಸಿ ಕಿಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

Ramzan Festival ರಂಜಾನ್ ಹಬ್ಬದ ಸಂದರ್ಭದಲ್ಲಿ ಸಮುದಾಯದ ಯಾರೋಬ್ಬರು ಸಹ ಹಸಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಸಾಮಾಜಿಕ ಸೇವೆಗಳ ಮೂಲಕ ಕಾರ್ಯಕ್ರಮ ಆಯೋಜಿಸಲಾಗಿದೆ. ಜೊತೆಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂರಾನಿ ನೌಜವಾನ್ ಚಾರಿಟೇಬಲ್ ಉಪಾಧ್ಯಕ್ಷ ನೂರ್, ಪ್ರಧಾನ ಕಾರ್ಯದರ್ಶಿ ಮುಂತೀಕ್, ಕಾರ್ಯದರ್ಶಿ ಅಜ್ಗರ್, ಖಜಾಂಚಿ ಆಲಿ, ಸ್ಥಳೀಯರಾದ ಮುನ್ನಬಾಯ್ ಹಾಗೂ ಮಸೀದಿಯ ಗುರುಗಳು, ಮಹಿಳೆಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...