Tuesday, February 3, 2026
Tuesday, February 3, 2026

District Police Shivamogga ಭದ್ರಾವತಿ ಪೊಲೀಸ್ ಮಿಂಚಿನ ಕಾರ್ಯ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ

Date:

District Police Shivamogga ದಿನಾಂಕ 04-04-2023 ರಂದು ಮಧ್ಯಾಹ್ನ ಪಿಎಸ್ಐ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ ಸತ್ಯಸಾಯಿ ನಗರದ ನೀರಿನ ಟ್ಯಾಂಕ್ ಹತ್ತಿರ, ವ್ಯಕ್ತಿಯೊಬ್ಬನು ನಿಂತುಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ.

District Police Shivamogga ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ ರವರ ಮುಂದಾಳತ್ವದಲ್ಲಿ, ಶ್ರೀ ನಿಂಗಪ್ಪ ಕರಕಣ್ಣ ನವರ್, ಪಿಎಸ್ಐ, ಹೊಸಮನೆ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು, ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಮುತ್ಯಾನ್ ಸಾಬ್ @ ಮುಕ್ತುಂ ಸಾಬ್, 66 ವರ್ಷ, ಸತ್ಯ ಸಾಯಿ ನಗರ, ಭದ್ರಾವತಿ ಈತನನ್ನು ವಶಕ್ಕೆ ಪಡೆದು, ಆರೋಪಿತನಿಂದ ಅಂದಾಜು ಮೌಲ್ಯ 6,000/- ರೂ ಗಳ ಒಟ್ಟು 150 ಗ್ರಾಂ ಒಣ ಗಾಂಜಾ ಮತ್ತು ರೂ 530/- ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತನ ವಿರುದ್ಧ ಗುನ್ನೆ ಸಂಖ್ಯೆ 0043/2023 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...