Monday, February 2, 2026
Monday, February 2, 2026

Adichunchanagiri Mutt ಯಾವುದೇ ಆಮಿಷಕ್ಕೊಳಗಾಗದೇ ಮತ ಚಲಾಯಿಸಿ -ಶ್ರೀಪ್ರಸನ್ನನಾಥ ಸ್ವಾಮೀಜಿ

Date:

Adichunchanagiri Mutt ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನವನ್ನು ಉತ್ತಮ ವ್ಯಕ್ತಿಗೆ ಮಾಡಿ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಪರಿವಾರ ಸಂಸ್ಥೆ ರೋಟರಿ ಹಾಲ್ ನಲ್ಲಿ ನಡೆಸಿದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇಂದಿನ ದಿನಗಳಲ್ಲಿ ಪಟ್ಟಣ ಪ್ರದೇಶದಲ್ಲಿ ಹೆಚ್ಚಾಗಿರುವುದು ದುರಂತದ ವಿಷಯ. ಶಿವಮೊಗ್ಗ ಜಿಲ್ಲೆಯನ್ನು ಒಂದು ಕುಟುಂಬದ ರೀತಿ ಕಟ್ಟಿಕೊಡುವ ಉದ್ದೇಶದಿಂದ ಶಿವಮೊಗ್ಗ ಪರಿವಾರ ಸಂಸ್ಥೆ ಇಂತಹ ಕಾರ್ಯಕ್ರಮಗಳಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.

Adichunchanagiri Mutt ಶಿವಮೊಗ್ಗ ಪರಿವಾರ ಸಂಸ್ಥೆಯ ಅಧ್ಯಕ್ಷ ಕೆ. ಎಸ್. ಶಶಿ ಅವರು ಅಧ್ಯಕ್ಷತೆ ವಹಿಸಿದ್ದರು. ಓಂ ಗಣೇಶ್ ಟ್ರಾಕ್ಟರ್ಸ್ ಮಾಲೀಕ ಹರ್ಷ ಕಾಮತ್ ಹಾಗೂ ಪರಿವಾರದ ಕಾರ್ಯಾಧ್ಯಕ್ಷ ಡಾ. ಅಮಿತಾ ಹೆಗಡೆ ಉಪಸ್ಥಿತರಿದ್ದರು.
ಇನ್ನೂರಕ್ಕೂ ಹೆಚ್ಚು ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಮತದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಶಿಕ್ಷಕ ಜಗದೀಶ್ ವಂದಿಸಿದರು. ಪೃತ್ವಿ ಗೌಡ ಅವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...