Thursday, June 25, 2026
Thursday, June 25, 2026

Padma Bhushan Award ಡಾ.ಎಸ್.ಎಲ್.ಭೈರಪ್ಪ ಮತ್ತು ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪುರಸ್ಕಾರ ಪ್ರದಾನ

Date:

Padma Bhushan Award ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡಿಗರಾದ , ಸಾಹಿತಿ .ಎಸ್​ಎಲ್​ ಭೈರಪ್ಪ,ಹಾಗೂ ಸುಧಾಮೂರ್ತಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಭೈರಪ್ಪನವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿದರೆ, ಸಮಾಜಸೇವೆಗಾಗಿ ಸುಧಾಮೂರ್ತಿ ಅವರಿಗೆ ಲಭಿಸಿದೆ.

Padma Bhushan Award ಕನ್ನಡದ ಹೆಸರಾಂತ ಕಾದಂಬರಿಗಾರರಲ್ಲಿ ಒಬ್ಬರಾದ, ತಮ್ಮ ವಿಚಾರಧಾರೆಗಳನ್ನ ಬರವಣಿಗೆಯ ಮೂಲಕ ಜನರ ಮನಸ್ಸನ್ನು ತಟ್ಟುವ ಲೇಖಕರಾದ ಎಸ್ .ಎಲ್. ಭೈರಪ್ಪ ಹಾಗೂ ಸರಳತೆ, ಸಜ್ಜನಿಕೆಗೆ ಇನ್ನೊಂದು ಹೆಸರು ಎಂಬಂತೆ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಜನರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿರುವ ಸುಧಾ ಮೂರ್ತಿಯವರಿಗೆ ಪದ್ಮಭೂಷಣ ಪುರಸ್ಕಾರ ದೊರೆತಿರುವುದು ನಿಜಕ್ಕೂ ಹೆಮ್ಮೆಯ ವಿಷಯ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಧಾ ಮೂರ್ತಿ ಅವರ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ, ಪುತ್ರ ರೋಹನ್ ಮೂರ್ತಿ ಮತ್ತು ಅವರ ಸಹೋದರಿ ಡಾ ಸುನಂದಾ ಕುಲಕರ್ಣಿ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸುಧಾಮೂರ್ತಿ ಅವರ ಪುತ್ರಿ, ಯುಕೆ ಪ್ರಧಾನಿ ರಿಷಿ ಸುನಕ್​ ಅವರನ್ನು ವಿವಾಹವಾಗಿರುವ ಅಕ್ಷತಾ ಮೂರ್ತಿ ಕೂಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...