Thursday, December 18, 2025
Thursday, December 18, 2025

Blood Donation  ಜೀವನದ ವಿಶೇಷ ಕ್ಷಣ ರಕ್ತದಾನ ಮಾಡಿದ ಅನುಭವ- ಡಾ.ವಿ.ಎಲ್.ಎಸ್.ಕುಮಾರ್

Date:

Blood Donation  ಜೀವನದ ವಿಶೇಷ ಸಂದರ್ಭಗಳಲ್ಲಿ ರಕ್ತದಾನ ಸೇರಿದಂತೆ ಸಮಾಜಮುಖಿ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್.ಕುಮಾರ್ ಹೇಳಿದರು.

ಜನ್ಮದಿನದ ಪ್ರಯುಕ್ತ ಶಿವಮೊಗ್ಗದ ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಮಾಡುವುದರ ಮುಖಾಂತರ ವಿಶೇಷವಾಗಿ ಆಚರಿಸಿಕೊಂಡು ಮಾತನಾಡಿದರು. ಜನ್ಮದಿನದ ಪ್ರಯುಕ್ತ ರಕ್ತದಾನದಂತಹ ಸಾರ್ಥಕ ಕಾರ್ಯ ಮಾಡಿದ್ದೇನೆ. ಪ್ರತಿಯೊಬ್ಬರು ಜನ್ಮದಿನ ಹಾಗೂ ವಿಶೇಷ ಸಂದರ್ಭದಲ್ಲಿ ರಕ್ತದಾನ ಮಾಡಬೇಕು. ಇದರಿಂದ ಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಂತಾಗುತ್ತದೆ ಎಂದು ತಿಳಿಸಿದರು.

Blood Donation  ರಕ್ತದ ಅವಶ್ಯಕತೆ ನಿರಂತರವಾಗಿ ಬೇಕಾಗುವುದರಿಂದ ಹಾಗೂ ರಕ್ತದ ಕೊರತೆ ಆಗದಂತೆ ನೋಡಿಕೊಳ್ಳಲು ಆರೋಗ್ಯವಂತಯ ಯುವಜನತೆ ರಕ್ತದಾನ ಮಾಡಲು ಮುಂದಾಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದ ಬೇಡಿಕೆಗೆ ಅವಶ್ಯಕತೆಗೆ ಅನುಗುಣವಾಗಿ ರಕ್ತದಾನ ಶಿಬಿರಗಳು ನಡೆಯಬೇಕು. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ಭಾಗಿಯಾಗಬೇಕು ಎಂದರು.

ಯುವಜನತೆ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನ ಮಾಡಲು ಯಾವುದೇ ಹಿಂಜರಿಕೆ, ಭಯ ಬೇಡ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಒಳ್ಳೆಯದೇ ಆಗುತ್ತದೆ. ರಕ್ತದಾನದಂತಹ ಸಮಾಜಮುಖಿ ಸೇವೆ ಅತ್ಯಂತ ಮುಖ್ಯ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನದಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುತ್ತದೆ. ಹೃದಯಾಘಾತ ಪ್ರಮಾಣ ಕಡಿಮೆ ಆಗುತ್ತದೆ. ಆರೋಗ್ಯ ಸದೃಢವಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷ ಆರ್.ಗಿರೀಶ್ 59ನೇ ಬಾರಿ ರಕ್ತದಾನ ಮಾಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕ ಮಂಜುನಾಥ್, ಧರಣೇಂದ್ರ ದಿನಕರ್, ನವೀನ್, ಅಲ್ಲಾಭಕ್ಷಿ ಹಾಗೂ ರೆಡ್‌ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನೇಕರು ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...