ಎಸ್.ಕೆ. ಶೇಷಚಂದ್ರಿಕ ಅವರು ನಾಡಿನ ಹಿರಿಯ ಮಾಧ್ಯಮ ತಜ್ಞರಲ್ಲಿ ಒಬ್ಬರಾಗಿದ್ದಾರೆ. ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ಇಲಾಖೆ, ಆಕಾಶವಾಣಿ, ದೂರದರ್ಶನ, ಇಂತಹ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಹೊಂದಿದ್ದಾರೆ. ಹಿರಿಯ ಪತ್ರಕರ್ತರಾಗಿ ನಾಡಿನ ಪ್ರಮುಖ ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿಯೂ ಖ್ಯಾತಿಯನ್ನು ಪಡೆದಿದ್ದಾರೆ.
ಆಕಾಶವಾಣಿಯಲ್ಲಿ ಬಾತ್ಮೀದಾರರಾಗಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಭಾರತ ಸರ್ಕಾರವು ನೀಡುವ ಎಲ್.ಕೆ. ಶರ್ಮಾ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪ್ರಸ್ತುತ ಈ ವರ್ಷ ಅವರಿಗೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ನೀಡಲಾಗಿದೆ. ಇವರಿಗೆ ರಾಜ್ಯೋತ್ಸವ ಮತ್ತು ಮಾಧ್ಯಮ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಗಿದೆ.
ಸಾರೆಕೊಪ್ಪ ಬಂಗಾರಪ್ಪ ನವರು ಮುಖ್ಯಮಂತ್ರಿಯಾಗಿದ್ದಾಗ ಇವರು ಪತ್ರಿಕಾ ಕಾರ್ಯದರ್ಶಿ ಯಾಗಿಯೂ ಸೇವೆ ಸಲ್ಲಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.