Thursday, December 18, 2025
Thursday, December 18, 2025

BJP Shivamogga ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ-ಎಸ್.ರುದ್ರೇಗೌಡ

Date:

BJP Shivamogga ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರಿಂದಲೂ ಅನುದಾನ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಹರಮಘಟ್ಟ ವ್ಯಾಪ್ತಿಯಲ್ಲಿ ಗ್ರಾಮದ ಪ್ರಮುಖರ ಮನೆ ಭೇಟಿ ಹಾಗೂ ಸಾರ್ವಜನಿಕರ ಭೇಟಿ ಮಾಡಿ ಸಮಾಲೋಚನೆ ನಡೆಸಿ ಮಾತನಾಡಿ, ಪ್ರತಿಯೊಂದು ಗ್ರಾಮಗಳಲ್ಲಿಯು ಅಗತ್ಯ ಮೂಲಸೌಕರ್ಯ ಒದಗಿಸುವ ಕೆಲಸಗಳನ್ನು ಮಾಡಿದ್ದಾರೆ.

ಮುಂದಿನ ಬಾರಿಯು ಅತಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಮಾಡಿಕೊಡಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಉತ್ತರಖಂಡ ಮಾಜಿ ಎಂಎಲ್‌ಎ, ಶಿವಮೊಗ್ಗ ಗ್ರಾಮಾಂತರ ಚುನಾವಣಾ ಪ್ರಮುಖರಾದ ಮುಖೇಶ್ ಸಿಂಗ್ ಕೋಲಿ ಮಾತನಾಡಿ, ಅಭಿವೃದ್ಧಿ ವೇಗವು ದ್ವಿಗುಣಗೊಳ್ಳಬೇಕಾದರೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಆಡಳಿತದಲ್ಲಿ ಇರುವುದು ಅತ್ಯಂತ ಮುಖ್ಯ.

BJP Shivamogga ದೇಶ, ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಬಿಜೆಪಿಯನ್ನು ಬೆಂಬಲಿಸಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಜತೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ನರೇಂದ್ರ ಮೋದಿ ಪ್ರಧಾನಿ ಅವಧಿಯಲ್ಲಿ ಭಾರತ ಅತಿ ಸದೃಢ ದೇಶವಾಗಿ ಬೆಳೆಯುತ್ತಿದ್ದು, ವಿಶ್ವದ ಬಹುತೇಕ ದೇಶಗಳು ಭಾರತದ ನಾಯಕತ್ವ ಒಪ್ಪಿವೆ.

ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರವು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮುನ್ನಡೆದಿದೆ. ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದರು.

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಮಾತನಾಡಿ, ಐದು ವರ್ಷಗಳ ಅವಧಿಯಲ್ಲಿ ಎಲ್ಲ ಗ್ರಾಮಗಳಿಗೆ ಅವಶ್ಯಕವಿರುವ ಪ್ರಥಮ ಆದ್ಯತಾ ಕೆಲಸಗಳನ್ನು ಮಾಡಿದ್ದು, ಸಂಪೂರ್ಣ ಅನುದಾನದ ಸದ್ಭಳಕೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಕೆಲಸಗಳನ್ನು ಮಾಡಲಾಗುತ್ತದೆ. ಗ್ರಾಮಾಂತರ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ.

ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಗ್ರಾಮಾಂತರ ವಿಧಾನ ಸಭಾ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಅನಾರೋಗ್ಯದಿಂದ ಇರುವ ಮುಖಂಡರನ್ನು ಭೇಟಿ ಆರೋಗ್ಯ ವಿಚಾರಿಸಿದರು.
ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗಿರೀಶ್, ಪ್ರಮುಖರಾದ ಷಡಾಕ್ಷರಪ್ಪ, ವಿರೂಪಾಕ್ಷಪ್ಪ, ಅಶೋಕ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು. ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ್ ಕಲ್ಲಜ್ಜನಾಳ್, ಪ್ರಧಾನ ಕಾರ್ಯದರ್ಶಿ ಗೋಪಾಲ್, ಉಜ್ಜಿನಪ್ಪ, ಮಲ್ಲೇಶ್, ರಂಗೋಜಿರಾವ್ ಸೇರಿದಂತೆ ಪ್ರಮುಖರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...