Wednesday, September 16, 2026
Wednesday, September 16, 2026

Karnataka Assembly Election ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಪ್ರತಿಸ್ಪರ್ಧಿ ಆಮ್ ಆದ್ಮಿ ಹೊರತು ಬಿಜೆಪಿ ಅಲ್ಲ- ಬೇಳೂರು ಗೋಪಾಲಕೃಷ್ಣ

Date:

karnataka Assembly Election ಸಾಗರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಭ್ರಷ್ಟಾಚಾರ ನಡೆಸಿದವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗೋಪಾಲಕೃಷ್ಣ ಬೇಳೂರು ಅವರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಹೇಳಿದರು.

ಮಾದ್ಯಮಮಿತ್ರರೊಂದಿಗೆ ಮಾತನಾಡಿದ ಅವರು,’ ಹಾಲಪ್ಪ ಹರತಾಳು ಅವರಿಗೆ ಮತ ನೀಡಬೇಡಿ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೇ ಪ್ರಚಾರ ಮಾಡುತ್ತಿದ್ದಾರೆ. ಈ ಕಾರಣ ಇಲ್ಲಿ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಪ್ರತಿಪಕ್ಷ ಸ್ಪರ್ಧಿಯೇ ಹೊರತು ಬಿಜೆಪಿಯಲ್ಲ ‘ ಎಂದು ಹೇಳಿದರು.

karnataka Assembly Election ಗೋಪಾಲಕೃಷ್ಣ ಬೇಳೂರು ತಮ್ಮ ಆಸ್ತಿಯ ಮೌಲ್ಯ 2.78 ಕೋಟಿ ರೂ , ಪತ್ನಿಯ ಆಸ್ತಿ ಮೌಲ್ಯ42.61 ರೂ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ‘ಜನರ ಬದುಕಿನಲ್ಲಿ ಬದಲಾವಣೆ ತರುವ ಅಭಿವೃದ್ಧಿ ಕಾರ್ಯವನ್ನು ಜನಪ್ರತಿನಿಧಿ ಆದವರು ಮಾಡಬೇಕು. ಭೂಮಿಯ ಹಕ್ಕು ನೀಡುವಲ್ಲಿ ಶಾಸಕ ಹಾಲಪ್ಪ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆ ಹಾರಿಸಲಿದೆ ‘ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಬಿ,ಆರ್ ಜಯಂತ್. ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್. ವಕೀಲ ವಿ,ಶಂಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...