Friday, September 27, 2024
Friday, September 27, 2024

Karnataka Assembly Election ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಪ್ರತಿಸ್ಪರ್ಧಿ ಆಮ್ ಆದ್ಮಿ ಹೊರತು ಬಿಜೆಪಿ ಅಲ್ಲ- ಬೇಳೂರು ಗೋಪಾಲಕೃಷ್ಣ

Date:

karnataka Assembly Election ಸಾಗರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಭ್ರಷ್ಟಾಚಾರ ನಡೆಸಿದವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗೋಪಾಲಕೃಷ್ಣ ಬೇಳೂರು ಅವರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಹೇಳಿದರು.

ಮಾದ್ಯಮಮಿತ್ರರೊಂದಿಗೆ ಮಾತನಾಡಿದ ಅವರು,’ ಹಾಲಪ್ಪ ಹರತಾಳು ಅವರಿಗೆ ಮತ ನೀಡಬೇಡಿ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೇ ಪ್ರಚಾರ ಮಾಡುತ್ತಿದ್ದಾರೆ. ಈ ಕಾರಣ ಇಲ್ಲಿ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಪ್ರತಿಪಕ್ಷ ಸ್ಪರ್ಧಿಯೇ ಹೊರತು ಬಿಜೆಪಿಯಲ್ಲ ‘ ಎಂದು ಹೇಳಿದರು.

karnataka Assembly Election ಗೋಪಾಲಕೃಷ್ಣ ಬೇಳೂರು ತಮ್ಮ ಆಸ್ತಿಯ ಮೌಲ್ಯ 2.78 ಕೋಟಿ ರೂ , ಪತ್ನಿಯ ಆಸ್ತಿ ಮೌಲ್ಯ42.61 ರೂ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ‘ಜನರ ಬದುಕಿನಲ್ಲಿ ಬದಲಾವಣೆ ತರುವ ಅಭಿವೃದ್ಧಿ ಕಾರ್ಯವನ್ನು ಜನಪ್ರತಿನಿಧಿ ಆದವರು ಮಾಡಬೇಕು. ಭೂಮಿಯ ಹಕ್ಕು ನೀಡುವಲ್ಲಿ ಶಾಸಕ ಹಾಲಪ್ಪ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆ ಹಾರಿಸಲಿದೆ ‘ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಬಿ,ಆರ್ ಜಯಂತ್. ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್. ವಕೀಲ ವಿ,ಶಂಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...