Wednesday, December 17, 2025
Wednesday, December 17, 2025

Karnataka Assembly Election ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಪ್ರತಿಸ್ಪರ್ಧಿ ಆಮ್ ಆದ್ಮಿ ಹೊರತು ಬಿಜೆಪಿ ಅಲ್ಲ- ಬೇಳೂರು ಗೋಪಾಲಕೃಷ್ಣ

Date:

karnataka Assembly Election ಸಾಗರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಭ್ರಷ್ಟಾಚಾರ ನಡೆಸಿದವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗೋಪಾಲಕೃಷ್ಣ ಬೇಳೂರು ಅವರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಹೇಳಿದರು.

ಮಾದ್ಯಮಮಿತ್ರರೊಂದಿಗೆ ಮಾತನಾಡಿದ ಅವರು,’ ಹಾಲಪ್ಪ ಹರತಾಳು ಅವರಿಗೆ ಮತ ನೀಡಬೇಡಿ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೇ ಪ್ರಚಾರ ಮಾಡುತ್ತಿದ್ದಾರೆ. ಈ ಕಾರಣ ಇಲ್ಲಿ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಪ್ರತಿಪಕ್ಷ ಸ್ಪರ್ಧಿಯೇ ಹೊರತು ಬಿಜೆಪಿಯಲ್ಲ ‘ ಎಂದು ಹೇಳಿದರು.

karnataka Assembly Election ಗೋಪಾಲಕೃಷ್ಣ ಬೇಳೂರು ತಮ್ಮ ಆಸ್ತಿಯ ಮೌಲ್ಯ 2.78 ಕೋಟಿ ರೂ , ಪತ್ನಿಯ ಆಸ್ತಿ ಮೌಲ್ಯ42.61 ರೂ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ‘ಜನರ ಬದುಕಿನಲ್ಲಿ ಬದಲಾವಣೆ ತರುವ ಅಭಿವೃದ್ಧಿ ಕಾರ್ಯವನ್ನು ಜನಪ್ರತಿನಿಧಿ ಆದವರು ಮಾಡಬೇಕು. ಭೂಮಿಯ ಹಕ್ಕು ನೀಡುವಲ್ಲಿ ಶಾಸಕ ಹಾಲಪ್ಪ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವಿನ ಪತಾಕೆ ಹಾರಿಸಲಿದೆ ‘ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಬಿ,ಆರ್ ಜಯಂತ್. ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಕ್ರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್. ವಕೀಲ ವಿ,ಶಂಕರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...