Sunday, August 2, 2026
Sunday, August 2, 2026

JDS Karnataka ಜೆಡಿಎಸ್ ತೆನೆ ಹೊತ್ತಆಯನೂರು ಮಂಜುನಾಥ್

Date:

JDS Karnataka ರಾಜಕೀಯದಲ್ಲಿ ಯಾವುದೂ ನಿಶ್ಚಿತವಲ್ಲ. ಸಿದ್ಧಾಂತಗಳ ಬಗ್ಗೆ ಪುಂಖಾನುಪುಂಖ ಭಾಷಣ ಬಿಗಿಯುತ್ತಿರುತ್ತಾರೆ.
ಮತದಾರರು ಅವರ ಪಕ್ಷನಿಷ್ಠೆಯನ್ನ ನೋಡಿ ತಲೆದೂಗುತ್ತೇವೆ.
ಶಿವಮೊಗ್ಗದ ಬಿಜಿಪಿ ಒಬ್ಬ ಒಳ್ಳೆಯ ವಾಗ್ಮಿ‌ ಅಂತ ಇದ್ದ ಆಯನೂರು ಮಂಜುನಾಥ್ ಈಗ ತಮ್ಮ ಲಹರಿಯನ್ನೇ ಬದಲಿಸಿಕೊಂಡಿದ್ದಾರೆ.ಬಿಜೆಪಿಯಿಂದ ಶಾಸಕ ರಾಜ್ಯಸಬೆ ಲೋಕಸಭೆ ಸದಸ್ಯತ್ವ ಅನುಭವಿಸಿದ್ದರು.

ಈಗ ಈ ಬಾರಿ ಅವರಿಗೆ ಬಿಜೆಪಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅನುವು ಮಾಡಿಕೊಡಲಿಲ್ಲ. ಹಾಲಿ ಶಾಸಕ
ಈಶ್ವರಪ್ಪನವರ ಮೇಲೆ ಗರಂ ಆಗಿ ಹೇಳಿಕೆ ನೀಡಿದ್ದರು. ಫ್ಲೆಕ್ಸಿ ಹಾಕಿಸಿ ಸುದ್ದಿಮಾಡಿ ಒಂದಿಷ್ಟು ನಾಯಕರ ಗಮನವನ್ನೂ ಸೆಳೆದಿದ್ದರು.

ಅದಕ್ಕೆ ಪ್ರತಿಯಾಗಿ ಈಶ್ವರಪ್ಪನವರ ಪಕ್ಷನಿಷ್ಠೆ ,ಆಯನೂರು ಮಂಜುನಾಥರ ಹೇಳಿಕೆಗಳನ್ನೆಲ್ಲ ಸೋಪಿನಂತೆ ನಿಚ್ಚಳ ಮಾಡಿತು.

JDS Karnataka ಸದ್ಯ ಶೆಟ್ಟರ ‌ಘರ್ ಛೋಡೋ ಅಭಿಯಾನ ಮತ್ತೆಲ್ಲಿ
ಶಿವಮೊಗ್ಗಕ್ಕೂ ಮುಟ್ಟಿತೋ ಅನ್ನುವಷ್ಟರಲ್ಲಿ ಆಯನೂರು ಹಿಂದಿನ ಚಾಳಿಯನ್ನೇ ಮುಂದುವರೆಸಿದ್ದಾರೆ.

ಮಲ್ಯರ ಪಾರ್ಟಿ, ಕಾಂಗ್ರೆಸ್, ಈಗ ಜೆಡಿಎಸ್. ವಿಚಾರಧಾರೆಗೆ ಹೆಸರಾದ ವ್ಯಕ್ತಿ. ಈಗ
ಟಿಕೆಟ್ ಗಾಗಿ ಅಲೆಮಾರಿಯಾಗಿದ್ದರು. ಎಲ್ಲವೂ ಅವರವರ ಆಯ್ಕೆ ನಿಜ. ಆದರೆ ಸದ್ಯ ಅವರು ಪಕ್ಷೇತರರಾಗಿ
ಚುನಾವಣಾ ಅಖಾಡಕ್ಕೆ ಇಳಿದಿದ್ದರೆ
ಅವರ ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೆ.

ಚಿತ್ರದುರ್ಗದಲ್ಲಿ ಜೆಡಿಎಸ್ ಮುಖಮಣಿ ಕುಮಾರಸ್ವಾಮಿ ಅವರ ಸಮ್ಮುಖ ಪಕ್ಷ ಸೇರಿದ್ದಾರೆ.
ಕಡೂರು ವೈಎಸ್ ವಿ ದತ್ತ ಅವರ ಸಂಗತಿಗೂ ಮಂಜುನಾಥ್ ಅವರ ವಿಚಾರಕ್ಕೂ ಅಜಗಜಾಂತರವಿದೆ.

ಏನೇ ಆಗಲಿ ಬಿಜೆಪಿಗೆ
ಒಂದು ಮೈನಸ್ಸು. ಆದರೆ ಅಭ್ಯರ್ಥಿಗಳಿಲ್ಲದೇ ಸೊರಗುತ್ತಿದ್ದ ಜೆಡಿಎಸ್ ಒಂದು ಪ್ರಮುಖ ಸೇರ್ಪಡೆ ಎಂಬ ಅಂಶವಂತೂ ದಿಟ.
ಆಯನೂರು ಮಂಜುನಾಥ್ ಅಂಥವರು
ರಾಜಕೀಯದಲ್ಲಿರ ಬೇಕು. ಅವರಿಗೆ ಶುಭವಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...