Sunday, August 2, 2026
Sunday, August 2, 2026

Assembly Election ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷೇತರರಾಗಿ ವಿವಿಧ ವ್ಯಕ್ತಿಗಳಿಂದ ನಾಮಪತ್ರ ಸಲ್ಲಿಕೆ

Date:

Assembly Election ಚಿಕ್ಕಮಗಳೂರಿನಲ್ಲಿ ಈ ಭಾರಿಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಅಭ್ಯರ್ಥಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.

ಅವರ ವಿವರ ಈ ಕೆಳಗಿನಂತಿದೆ. ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಲು ಮಾಜಿ ನಗರಸಭಾ ಸದಸ್ಯ ಸಿ.ಕೆ.ಜಗದೀಶ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿವಿಕೆಗೆ ಹಾಗೂ ಭ್ರಷ್ಟಮುಕ್ತ ಸಮಾಜ ನಿರ್ಮಾ ಣ ಮಾಡುವ ನಿಟ್ಟಿನಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಜನಸಾಮಾನ್ಯರಿಗೆ ಸಮಾನ ಹಕ್ಕು ದೊರೆಯುವಂತೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೀತಾ ಜಗದೀಶ್, ಮುಖಂಡರಾದ ಯುಕ್ತದೇವಿ, ರಾಮರಾಜು, ರಾಜು ಹಾಜರಿದ್ದರು.

Assembly Election ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಲು ಕ.ರ.ವೇ. ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯ ಹಾಗೂ ಜಿಲ್ಲೆಯಲ್ಲಿ ಭಾರೀ ಭ್ರಷ್ಟಚಾರದಲ್ಲಿ ಮುಳುಗಿದ್ದು, ಜನಸಾಮಾ ನ್ಯರ ಸಣ್ಣಪುಟ್ಟ ಕೆಲಸಗಳಿಗೆ ಭಾರೀ ತೊಂದರೆಯಾಗಿದೆ. ಇವೆಲ್ಲವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಮತದಾರರು ಈ ಬಾರಿ ಬೆಂಬಲಿಸಲಿದ್ದಾರೆ ಎಂದು ಆಶಾಭಾವನೆ ವ್ಯಕ್ತಪಡಿ ಸಿದರು.

ಈ ಸಂದರ್ಭದಲ್ಲಿ ಕ.ರ.ವೇ. ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಯುವಘಟಕದ ಅಧ್ಯಕ್ಷ ಭರತ್, ನಾದೀಯಾ, ತಸ್ಮೀಯಾ ಹಾಜರಿದ್ದರು.

ಚಿಕ್ಕಮಗಳೂರು ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸ್ಪರ್ಧಿಸಲು ಜಿಲ್ಲಾ ಅಧ್ಯಕ್ಷ ಶಿವಪ್ರಕಾಶ್ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕನ್ನಡ ನಾಡು, ನುಡಿಯ ರಕ್ಷಣೆ ಹಿನ್ನೆಲೆಯಲ್ಲಿ ಪಕ್ಷವು ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ವಿವಿಧ ಕಚೇರಿಗಳಲ್ಲಿ ಕನ್ನಡ ಭಾಷೆಯ ಅರಿವಿಲ್ಲದವರು ಕೆಲಸ ಮಾಡಲಾ ಗುತ್ತಿದೆ. ಆದ್ದರಿಂದ ವಿವಿಧ ಕಚೇರಿಗಳಲ್ಲಿ ರಾಜ್ಯದ ಯುವಕರಿಗೆ ಹೆಚ್ಚು ಆದ್ಯತೆ ನೀಡುವುದು ಹಾಗೂ ಭ್ರಷ್ಟಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸ್ಪರ್ಧಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟç ಸಮಿತಿ ಜಿಲ್ಲಾ ಕಾರ್ಯದರ್ಶಿ ರತನ್, ಖಜಾಂಚಿ ವರುಣ್, ಪದಾಧಿಕಾರಿಗಳಾದ ಅಲೆನ್‌ಲೋಬೋ, ನಿತಿನ್ ಹಾಜರಿದ್ದರು.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲು ಬಿ.ಎಂ.ತಿಮ್ಮಶೆಟ್ಟಿ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾ ಧಿಕಾರಿ ಕಿಶೋರ್‌ಕುಮಾರ್ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಂಜನ್‌ಅಜಿತ್‌ಕುಮಾರ್, ನಗರಸಭಾ ಸದಸ್ಯರಾದ ಎ.ಸಿ.ಕುಮಾರ ಗೌಡ, ಗೋಪಿ, ನಿಸಾರ್ ಅಹ್ಮದ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...