Thursday, December 18, 2025
Thursday, December 18, 2025

Ramzan Festival ಕಾಂಗ್ರೆಸ್ ಅಭ್ಯರ್ಥಿಗೆ ರಂಜಾನ್ ಸಮಾರಂಭದಲ್ಲಿ ಭಾಗಿಯಾಗಲು ಅಡ್ಡಿಮಾಡಿದ ಬಗ್ಗೆ ಖಂಡನೆ

Date:

Ramzan Festival ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಸಮೀಪದ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಅವರು ರಂಜಾನ್ ಹಬ್ಬದ ಪ್ರಯುಕ್ತ ಶುಭಾಶಯ ಕೋರಲು ತೆರಳಿದ ಸಂದರ್ಭದಲ್ಲಿ ಕೆಲವು ಮಂದಿ ಅಡ್ಡಿಪಡಿರುವುದಕ್ಕೆ ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ವೇಳೆ ಹೆಚ್.ಡಿ.ತಮ್ಮಯ್ಯ ಅವರು ಮುಸ್ಲೀಂ ಬಾಂದವರಿಗೆ ಹಬ್ಬದ ಶುಭಾಶಯ ಕೋರುವ ಸ್ಥಳಕ್ಕೆ ತೆರಳದಂತೆ ಕೆಲವು ಪಕ್ಷದ ವ್ಯಕ್ತಿಗಳು ತಡೆವೊಡ್ಡಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಾರ್ಥನೆ ಸ್ಥಳಕ್ಕೆ ತೆರಳದಂತೆ ಅಡ್ಡಿಪಡಿಸಿರುವುದನ್ನು ಗಮನಿಸಿದರೆ ವಿರೋಧ ಪಕ್ಷಗಳು ಸೋಲಿನ ಹತಾಶೆ ಯಿಂದ ಈ ರೀತಿಯ ಮಾಡಲಾಗುತ್ತಿದೆ. ಪ್ರಾರ್ಥನೆ ಸಲ್ಲಿಸುವ ಜಾಗವೆಂದರೆ ದೇವರಿರುವಂತಹ ಜಾಗ. ಅಂತಹ ಜಾಗದಲ್ಲೇ ಹಬ್ಬದ ಶುಭಾಶಯ ಕೋರಲು ತೆರಳದಂತೆ ತಡೆವೊಡ್ಡಿರುವುದನ್ನು ನೋಡಿದರೆ ವಿರೋಧ ಪಕ್ಷದ ಕೈವಾಡವಿದ್ದಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದಿದ್ದಾರೆ.
ಆದ್ದರಿಂದ ಮುಸ್ಲೀಂ ಬಾಂಧವರು ಪ್ರಾರ್ಥನೆ ಸಲ್ಲಿಸುವ ಜಾಗದಲ್ಲಿ ಈ ರೀತಿ ವರ್ತನೆ ಮಾಡಬಾರದು.

Ramzan Festival ಇದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಆ ನಿಟ್ಟಿನಲ್ಲಿ ಪ್ರಾರ್ಥನಾ ಸ್ಥಳಕ್ಕೆ ತಡೆದಿರುವ ವ್ಯಕ್ತಿಗಳು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...