Thursday, March 19, 2026
Thursday, March 19, 2026

BJP Karnataka ಡಬ್ಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳಾಗಿವೆ

Date:

BJP Karnataka ಬಿಜೆಪಿ ಸರ್ಕಾರದ ಅವಧಿಯ ಪರಿಣಾಮಕಾರಿ ಯೋಜನೆಗಳಿಂದ ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವ್ಯಾಪ್ತಿಯ ಹರಿಗೆ, ಹಾಥಿನಗರ, ಯಲವಟ್ಟಿ ಕ್ಯಾಂಪ್ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಚಾರ ಸಭೆ ಹಾಗೂ ಮನೆ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದರು.

ಬಿಜೆಪಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಕೋಟಿ ರೂ.ಗೂ ಅಧಿಕ ಅನುದಾನ ಉಪಯೋಗಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಮಾದರಿ ಗ್ರಾಮಗಳ ನಿರ್ಮಾಣಕ್ಕೆ ಬಿಜೆಪಿಯೇ ಭರವಸೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು.

BJP Karnataka ದೇಶದ ಸುರಕ್ಷತೆ ಹಾಗೂ ಹಿತದೃಷ್ಠಿಯಿಂದ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ತರ ಕೆಲಸಗಳನ್ನು ಮಾಡುತ್ತಿದೆ. ದೇಶದಲ್ಲಿ ಉತ್ತಮ ಆಡಳಿತ ನಡೆಸುವ ಸದೃಢ ರಾಷ್ಟ್ರ ನಿರ್ಮಾಣ ಆಗಿದೆ.

ನರೇಂದ್ರ ಮೋದಿ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರದ ಕೊಡುಗೆಯು ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ಪ್ರಮುಖರಾದ ವೀರೂಪಾಕ್ಷಪ್ಪ, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಹರಿಗೆ, ಹಾಥಿನಗರ, ಯಲವಟ್ಟಿ ಕ್ಯಾಂಪ್‌ನ ಸ್ಥಳೀಯರು ಹಾಜರಿದ್ದರು. ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ ಕಲ್ಲಜ್ಜನಾಳ್, ಸ್ವರೂಪ್ ಸೇರಿದಂತೆ ಪಕ್ಷದ ವಿವಿಧ ಸಮಿತಿ ಮುಖಂಡರು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಚುನಾವಣಾ ಕಾರ್ಯಾಲಯದಲ್ಲಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...