Friday, March 27, 2026
Friday, March 27, 2026

Adi Chunchanagiri Mutt ಸಂಸ್ಕಾರಯುತ ಜೀವನ ನಡೆಸುವವರ ಸಂಖ್ಯೆ ಕ್ಷೀಣಿಸುತ್ತಿದೆ-ಡಿ.ವಿ.ಸತೀಶ್

Date:

Adi Chunchanagiri Mutt ಸಂಸ್ಕಾರಯುತ ಜೀವನ ನಡೆಸುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಆದಿ ಚುಂಚನಗಿರಿ ವಿದ್ಯಾ ಸಂಸ್ಥೆಯ ನಿರ್ದೇಶಕ ಡಿ.ವಿ.ಸತೀಶ್ ಬೇಸರ ವ್ಯಕ್ತಪಡಿಸಿದರು.

ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ವತಿಯಿಂದ ನಗರದ ಶ್ರೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ 12 ದಿನಗಳ ಕಾಲ 12 ರಿಂದ 15 ವಯೋಮಾನದ ಬಾಲಕರಿಗೆ ಏರ್ಪಡಿಸಲಾಗಿದ್ದ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ‍್ಯಾಗರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಂಸ್ಕಾರಯುತ ಜೀವನವನ್ನು ಸಾಗಿಸಿದರೆ ನಮ್ಮ ಸಮಾಜ ಉತ್ತಮ ಹಾದಿಯಲ್ಲಿ ಸಾಗುತ್ತಿದೆ ಎಂದರು.

Adi Chunchanagiri Mutt ಸಂಸ್ಕಾರವು ಮಾನವ ಜೀವನದ ವಿವಿಧ ಘಟ್ಟಗಳನ್ನು ಗುರುತು ಮಾಡುತ್ತದೆ. ಧರ್ಮ ಮಾರ್ಗಗಳಲ್ಲಿ ನಡೆಯಲು ಅರ್ಹತೆಯನ್ನು ನೀಡುತ್ತದೆ. ಉತ್ತಮ ಜೀವನ ನಡೆಸಲು ಕೆಲವೊಂದು ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸುವುದರಿಂದ ಸಾಧ್ಯವಾಗುತ್ತದೆ.

ಸಂಸ್ಕಾರಗಳನ್ನು ಯಾವುದೋ ಒಂದು ವರ್ಗಕ್ಕೆ ಮೀಸಲಿಡದೆ ಸರ್ವಜನಾಂಗಕ್ಕೂ ಲಭಿಸಬೇಕು ಎಂಬ ಆಶಯದಿಂದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು, ಪುಟ್ಟ ಮಕ್ಕಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಬಿತ್ತಿದಾಗ ಆ ಮಕ್ಕಳು ಮನೆಯವರಿಗೆಲ್ಲಾ ಮಾದರಿಯಾಗುತ್ತಾರೆ. ಪ್ರಾತಃ ಕಾಲದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಮನೆಗಳಲ್ಲಿ ಆರಂಭಿಸಿದರೆ ಆ ಮನೆಯ ಎಲ್ಲಾ ಕೆಲಸ ಕಾರ್ಯಗಳು ಕುಟುಂಬದ ಸದಸ್ಯರ ಕನಸಿನಂತೆ ಈಡೇರಲು ಭಗವಂತನ ಪ್ರೇರಣೆಯಾಗುತ್ತದೆ, ಅಲ್ಲದೇ ಭಗವಂತನ ರಕ್ಷಣೆಯೂ ಕೂಡ ಕುಟುಂಬದ ಸದಸ್ಯರ ಮೇಲೆ ಇರುತ್ತದೆ ಎಂದ ಅವರು, ನಮ್ಮ ಹೃದಯಾಂತರಾಳದಲ್ಲಿ ಇವುಗಳ ಬಗ್ಗೆ ಆಸಕ್ತಿಯ ಬೀಜ ಮೊಳಕೆಯೊಡೆಯುವಂತಾಗಬೇಕು ಎಂದರು.

ಪ್ರತಿಯೊಂದು ಕುಟುಂಬದಲ್ಲಿ ಓರ್ವ ಸದಸ್ಯ ಸಂಸ್ಕಾರವನ್ನು ಕಲಿತರೆ ಇಡೀ ಕುಟುಂಬ ಸಂಸ್ಕಾರವಂತ ಕುಟುಂಬವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಖಾ ಮಠ ಮತ್ತು ಶ್ರೀಗಳ ಕೃಪಾಶೀರ್ವಾದದೊಂದಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಈ ಸುವರ್ಣಾವಕಾಶವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಧಾರ್ಮಿಕ ಹಾಗೂ ಸಂಸ್ಕಾರಯುತ ಜೀವನಕ್ಕೆ ನಾಂದಿ ಹಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಹೇಮಾ ಎಸ್.ಆರ್, ಆಡಳಿತಾಧಿಕಾರಿ ಅಮಿಷ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

12 ರಿಂದ 15 ವಯಸ್ಸಿನ ಬಾಲಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲು ಬಂದವರಿಗೆ ಆದ್ಯತೆ . ಈ ಕೂಡಲೇ ಹೆಸರನ್ನು ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- ದೂರವಾಣಿ ಸಂಖ್ಯೆ- ,9686349534 9739744430, 9902410112

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...