Sunday, August 23, 2026
Sunday, August 23, 2026

JCI Shivamogga ಪ್ರಸ್ತುತ ಸಂವಹನ ಕೌಶಲ ಅಗತ್ಯ-ವಸಂತ್ ಹೋಬಳಿದಾರ್

Date:

JCI Shivamogga ಉತ್ತಮ ಸಂವಹನ ಕೌಶಲ್ಯವು ಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುತ್ತದೆ. ಸಂವಹನ ಸಾಮಾರ್ಥ್ಯ ಉತ್ತಮವಾಗಿದ್ದಲ್ಲಿ ಉನ್ನತ ಸ್ಥಾನಗಳನ್ನು ತಲುಪಬಹುದು. ಸಂವಹನ ಕೌಶಲ್ಯ ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಸಂವಹನ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅವಕಾಶಗಳ ಸದ್ಭಳಕೆ ಮಾಡಿಕೊಳ್ಳುವಲ್ಲಿ ಸಂವಹನ ತುಂಬಾ ಮುಖ್ಯವಾಗುತ್ತದೆ. ಜ್ಞಾನವನ್ನು ಪರಿಣಾಮಕಾರಿಯಾಗಿ ಉಪಯೋಗಿಸಲು ಸಹ ನಮ್ಮಲ್ಲಿನ ಸಂವಹನ ಕೌಶಲ್ಯ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

JCI Shivamogga ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಬಿ. ಹಿರೇಮಠ ಮಾತನಾಡಿ, ನಾಯಕತ್ವ ಗುಣ ಸೇರಿದಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುವ ಜೆಸಿಐ ನಂತಹ ಸಂಸ್ಥೆಗಳಲ್ಲಿ ಯುವಜನತೆ ಹೆಚ್ಚು ತೊಡಗಿಸಿಕೊಳ್ಳಬೇಕು. ನಮ್ಮ ಆಸಕ್ತಿ ಕ್ಷೇತ್ರದಲ್ಲಿ ಯಶಸ್ವಿ ವ್ಯಕ್ತಿಯಾಗಿ ಬೆಳೆಯಲು ಜೆಸಿಐ ತುಂಬಾ ನೆರವಾಗುತ್ತದೆ ಎಂದು ಹೇಳಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಯುವಜನರಿಗೆ ತರಬೇತಿ ನೀಡುವ ವಿಶೇಷ ಕಾರ್ಯಾಗಾರಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ತರಬೇತುದಾರರಾದ ಸುಧಾಕರ್, ವಿಜಯಕುಮಾರ್, ವಲಯ ತರಬೇತುದಾರ ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂವಹನ ಕೌಶಲ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.

ವಲಯ ಅಧ್ಯಕ್ಷ ಅನೂಷ್ ಗೌಡ, ವಲಯ ನಿರ್ದೇಶಕಿ ಶಾರದಾ ಶೇಷಗಿರಿಗೌಡ, ಸಂತೋಷ್, ಜೆಸಿಐ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಡಾ. ಲಲಿತಾ, ಕಾರ್ಯಕ್ರಮ ಸಂಯೋಜಕಿ ವಿದ್ಯಾ ಸುದರ್ಶನ್, ಗೌರೀಶ್, ಪ್ರಮೋದ್ ಶಾಸ್ತ್ರಿ, ವಾಣಿ, ಸುರೇಂದ್ರ ಕೋಟ್ಯಾನ್, ರಾಜ್ಯದ ವಿವಿಧೆಡೆಯ ಶಿಬಿರಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...