Tuesday, May 5, 2026
Tuesday, May 5, 2026

Assembly Election ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಅನ್ವಯ ರಾಜಕೀಯ ಚಟುವಟಿಕೆ ನಿಷೇಧ

Date:

Assembly Election ಮೇ.10 ರಂದು ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಜೊತೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳು, ವಿಧಿಗಳಲ್ಲಿ ರಾಜಕೀಯ ಚಟುವಟಿಕೆ ಅಥವಾ ಲಾಭಕ್ಕಾಗಿ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿರುವ ಅವರು ರಾಜ್ಯ ವಕ್ಫ್ ಸಲಹಾ ಸಮಿತಿಯ ಆದೇಶ ದನ್ವಯ ಜಿಲ್ಲೆಯಲ್ಲಿ ವಕ್ಫ್ ಮಂಡಳಿ ಅಧೀನದಲ್ಲಿರುವ ನೋಂದಾಯಿತ, ನೋಂದಾಯಿತವಿಲ್ಲದಿರುವ ಸಂಸ್ಥೆಗಳು, ಮಸೀದಿ, ದರ್ಗಾ, ಈದ್ಗಾ ಮೈದಾನ, ಇನ್ನಿತರೆ ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಚಟುವಟಿ ಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆಡಳಿತ ಸಮಿತಿಯವರನ್ನು ನೇರ ಹೊಣೆಗಾರರು ಎಂದು ಬಿಂಬಿಸಿ ಅಂತಹ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Assembly Election ಈ ಬಗ್ಗೆ ರಾಜ್ಯ ವಕ್ಫ್ ಮಂಡಳಿಯ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಚುನಾವಣಾ ಮಾದರಿ ನೀತಿ ಸಂಹಿತೆ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department Of Skill Development ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

Department Of Skill Development ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ)...

Shivamogga City Water Supply  ಶಿವಮೊಗ್ಗ ನಗರಕ್ಕೆ ಮೇ 5 ಮತ್ತು 6 ರಂದು‌ ಕುಡಿಯುವ ನೀರಿನ ಸರಬರಾಜು ವ್ಯತ್ಯಯ.

Shivamogga City Water Supply ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ...

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ತರಬೇತಿ ಪ್ರಕಟಣೆ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ...

Sharavati ಬೇಸೂರು ಅಣುಸ್ಥಾವರ ಬೇಡ. ವೃಕ್ಷಲಕ್ಷ ಆಂದೋಲನದ ಪರವಾಗಿ ಒತ್ತಾಯ.

Sharavati ಇತ್ತೀಚೆಗೆ ಬಹಿರಂಗಗೊಂಡ ವ್ಯಾಪಕ ಚರ್ಚೆಗೆ, ವಿವಾದಕ್ಕೆ ಕಾರಣವಾದ ಶಿವಮೊಗ್ಗಾ ಜಿಲ್ಲೆ ಸಾಗರ...