Sunday, August 2, 2026
Sunday, August 2, 2026

Assembly Election ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಅನ್ವಯ ರಾಜಕೀಯ ಚಟುವಟಿಕೆ ನಿಷೇಧ

Date:

Assembly Election ಮೇ.10 ರಂದು ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಜೊತೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳು, ವಿಧಿಗಳಲ್ಲಿ ರಾಜಕೀಯ ಚಟುವಟಿಕೆ ಅಥವಾ ಲಾಭಕ್ಕಾಗಿ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿರುವ ಅವರು ರಾಜ್ಯ ವಕ್ಫ್ ಸಲಹಾ ಸಮಿತಿಯ ಆದೇಶ ದನ್ವಯ ಜಿಲ್ಲೆಯಲ್ಲಿ ವಕ್ಫ್ ಮಂಡಳಿ ಅಧೀನದಲ್ಲಿರುವ ನೋಂದಾಯಿತ, ನೋಂದಾಯಿತವಿಲ್ಲದಿರುವ ಸಂಸ್ಥೆಗಳು, ಮಸೀದಿ, ದರ್ಗಾ, ಈದ್ಗಾ ಮೈದಾನ, ಇನ್ನಿತರೆ ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಚಟುವಟಿ ಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆಡಳಿತ ಸಮಿತಿಯವರನ್ನು ನೇರ ಹೊಣೆಗಾರರು ಎಂದು ಬಿಂಬಿಸಿ ಅಂತಹ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Assembly Election ಈ ಬಗ್ಗೆ ರಾಜ್ಯ ವಕ್ಫ್ ಮಂಡಳಿಯ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಚುನಾವಣಾ ಮಾದರಿ ನೀತಿ ಸಂಹಿತೆ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...