Wednesday, October 2, 2024
Wednesday, October 2, 2024

ಇಳಿಕೆಯಾಗದ ತರಕಾರಿ ಬೆಲೆ. ಗ್ರಾಹಕರ ಪರದಾಟ.

Date:

ಇಂಧನದ ದರ ಇಳಿಮುಖ ವಾಗುತ್ತಿದ್ದಂತೆ, ತರಕಾರಿ ಬೆಲೆ ಕೂಡ ಕಡಿಮೆಯಾಗಬಹುದು ಎಂದುಕೊಂಡಿದ್ದ ಗ್ರಾಹಕರಿಗೆ ನಿರಾಸೆ ಎದುರಾಗಿದೆ.

ಈ ಬಾರಿಯ ವರುಣನ ಆರ್ಭಟದಿಂದ ರೈತರ ಹೊಲದಲ್ಲಿರುವ ಬೆಳೆ ನಾಶವಾಗಿದೆ. ಅಲ್ಲದೆ, ತಾವು ಬೆಳೆದ ಎಲ್ಲಾ ತರಕಾರಿ, ಇತರೆ ಬೆಳೆಗಳು ನೀರುಪಾಲಾಗಿದೆ. ರೈತರು ಹೊಲದಲ್ಲಿ ಅಳಿದುಳಿದ ತರಕಾರಿಗಳನ್ನು ಮಾರುಕಟ್ಟೆಗೆ ತಂದರೂ ಸಹ , ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದರೆ, ಅದೇ ತರಕಾರಿ ಚಿಲ್ಲರೆ ಮಾರುಕಟ್ಟೆಯಲ್ಲಿ ಭಾರಿ ಬೆಲೆಗೆ ಮಾರಾಟವಾಗುತ್ತಿದೆ. ಇದರಿಂದ ಕಷ್ಟಪಟ್ಟು ಬೆಳೆ ಬೆಳೆದ ರೈತರು ಹಾಗೂ ತರಕಾರಿ ಕೊಳ್ಳುವ ಗ್ರಾಹಕರಿಗೆ ಪ್ರಯೋಜನವಾಗುತ್ತಿಲ್ಲ.

‘ಕಳೆದ 15ದಿನಗಳಿಂದ ತರಕಾರಿ ದರ ಏರಿಕೆಯಾಗುತ್ತಲೇ ಇದೆ. ಗುಣಮಟ್ಟದಲ್ಲೂ ಕೊರತೆ ಇದೆ. ಹೀಗಾಗಿ, 1ಕೆಜಿ ಖರೀದಿಸುವ ಗ್ರಾಹಕರು ಅರ್ಧ ಕೆಜಿ ಕಾಲು ಕೆಜಿ ಖರೀದಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಟೊಮೋಟೊ ಕೆಜಿಗೆ 80 ರೂ. ಇತ್ತು. ಆದರೆ ಈಗ 65 ರೂಪಾಯಿಗಳಿಗೆ ಇಳಿದಿದೆ ಎಂದು ಶಿವಮೊಗ್ಗ ಪ್ರಮುಖ ತರಕಾರಿ ಮಾರಾಟಗಾರರು ತಿಳಿಸಿದ್ದಾರೆ.

ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಜೀವನ ಕಷ್ಟವಾಗಿದೆ. ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಜನ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ತರಕಾರಿ ಸ್ಟಾಲ್, ಅಂಗಡಿಗಳಲ್ಲಿ ಮುಂಚಿನಂತೆ ತಾಜಾ ತರಕಾರಿಗಳು ದೊರೆಯುತ್ತಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...