Friday, April 3, 2026
Friday, April 3, 2026

ಇಳಿಕೆಯಾಗದ ತರಕಾರಿ ಬೆಲೆ. ಗ್ರಾಹಕರ ಪರದಾಟ.

Date:

ಇಂಧನದ ದರ ಇಳಿಮುಖ ವಾಗುತ್ತಿದ್ದಂತೆ, ತರಕಾರಿ ಬೆಲೆ ಕೂಡ ಕಡಿಮೆಯಾಗಬಹುದು ಎಂದುಕೊಂಡಿದ್ದ ಗ್ರಾಹಕರಿಗೆ ನಿರಾಸೆ ಎದುರಾಗಿದೆ.

ಈ ಬಾರಿಯ ವರುಣನ ಆರ್ಭಟದಿಂದ ರೈತರ ಹೊಲದಲ್ಲಿರುವ ಬೆಳೆ ನಾಶವಾಗಿದೆ. ಅಲ್ಲದೆ, ತಾವು ಬೆಳೆದ ಎಲ್ಲಾ ತರಕಾರಿ, ಇತರೆ ಬೆಳೆಗಳು ನೀರುಪಾಲಾಗಿದೆ. ರೈತರು ಹೊಲದಲ್ಲಿ ಅಳಿದುಳಿದ ತರಕಾರಿಗಳನ್ನು ಮಾರುಕಟ್ಟೆಗೆ ತಂದರೂ ಸಹ , ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದರೆ, ಅದೇ ತರಕಾರಿ ಚಿಲ್ಲರೆ ಮಾರುಕಟ್ಟೆಯಲ್ಲಿ ಭಾರಿ ಬೆಲೆಗೆ ಮಾರಾಟವಾಗುತ್ತಿದೆ. ಇದರಿಂದ ಕಷ್ಟಪಟ್ಟು ಬೆಳೆ ಬೆಳೆದ ರೈತರು ಹಾಗೂ ತರಕಾರಿ ಕೊಳ್ಳುವ ಗ್ರಾಹಕರಿಗೆ ಪ್ರಯೋಜನವಾಗುತ್ತಿಲ್ಲ.

‘ಕಳೆದ 15ದಿನಗಳಿಂದ ತರಕಾರಿ ದರ ಏರಿಕೆಯಾಗುತ್ತಲೇ ಇದೆ. ಗುಣಮಟ್ಟದಲ್ಲೂ ಕೊರತೆ ಇದೆ. ಹೀಗಾಗಿ, 1ಕೆಜಿ ಖರೀದಿಸುವ ಗ್ರಾಹಕರು ಅರ್ಧ ಕೆಜಿ ಕಾಲು ಕೆಜಿ ಖರೀದಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಟೊಮೋಟೊ ಕೆಜಿಗೆ 80 ರೂ. ಇತ್ತು. ಆದರೆ ಈಗ 65 ರೂಪಾಯಿಗಳಿಗೆ ಇಳಿದಿದೆ ಎಂದು ಶಿವಮೊಗ್ಗ ಪ್ರಮುಖ ತರಕಾರಿ ಮಾರಾಟಗಾರರು ತಿಳಿಸಿದ್ದಾರೆ.

ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಜೀವನ ಕಷ್ಟವಾಗಿದೆ. ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಜನ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ತರಕಾರಿ ಸ್ಟಾಲ್, ಅಂಗಡಿಗಳಲ್ಲಿ ಮುಂಚಿನಂತೆ ತಾಜಾ ತರಕಾರಿಗಳು ದೊರೆಯುತ್ತಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...