Saturday, December 6, 2025
Saturday, December 6, 2025

Shivamogga Airport ಇಂಡಿಗೋ ಏರ್ ಲೈನ್ಸ್ ನಿಂದ ಶೀಘ್ರದಲ್ಲೇ ಶಿವಮೊಗ್ಗ-ಬೆಂಗಳೂರು ವಿಮಾನ ಸಂಚಾರ

Date:

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶೀಘ್ರ ವಿಮಾನಗಳ ಸಂಚಾರ ಶೀಘ್ರದಲ್ಲೇ ಆರಂಭಿಸುವ ಸಾಧ್ಯತೆ ಇದೆ ಎಂದು ಇಂಡಿಗೋ ಏರ್‌ಲೈನ್ಸ್ ಕರ್ನಾಟಕ ಸೇಲ್ಸ್ ಸೀನಿಯರ್ ಮ್ಯಾನೇಜರ್ ಸೌರಭ್ ಸಚದೇವ್ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಜ್ರ ಮಹೋತ್ಸವದ ಭಾಗವಾಗಿ ಆಯೋಜಿಸಿದ್ದ ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಶಿವಮೊಗ್ಗದಿಂದ ಹೆಚ್ಚು ಅವಶ್ಯಕತೆ ಇರುವ ಹಾಗೂ ಪ್ರಮುಖ ಸ್ಥಳಗಳಿಗೆ ಸಂಚಾರ ಮಾರ್ಗ ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಸೇವೆ ಆರಂಭ ಆಗುವುದರಿಂಧ ಕೈಗಾರಿಕಾ ಹಾಗೂ ಉದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಕೈಗಾರಿಕೆ, ಉದ್ಯಮಗಳ ಸ್ಥಾಪನೆ ಹೆಚ್ಚಿಸುವ ಜತೆಯಲ್ಲಿ, ಶಿವಮೊಗ್ಗ-ದಾವಣಗೆರೆ, ಶಿವಮೊಗ್ಗ-ಚಿತ್ರದುರ್ಗ ಒಳಗೊಂಡಂತೆ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾದಲ್ಲಿ ಉದ್ಯಮ ಕ್ಷೇತ್ರಕ್ಕೆ ಹೆಚ್ಚು ಉಪಯೋಗವಾಗಲಿದೆ ಎಂದು ಹೇಳಿದರು.

Shivamogga Airport ಶಿವಮೊಗ್ಗ ಜಿಲ್ಲೆ ಪ್ರವಾಸೋದ್ಯಮದ ಕೇಂದ್ರ ಸ್ಥಾನ ಆಗಿದ್ದು, ಶಿವಮೊಗ್ಗ ಕೇಂದ್ರ ಸ್ಥಾನದಿಂದ ಪ್ರಮುಖ ಪ್ರವಾಸಿ ತಾಣಗಳಿಗೆ ಸಮೀಪ ಆಗಲಿದೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ದೃಷ್ಠಿಯಿಂದಲೂ ವಿಮಾನಯಾನ ಸೌಲಭ್ಯ ಪರಿಣಾಮಕಾರಿಯಾಗಿ ಬಳಕೆ ಮಾಡಲು ಪ್ರೋತ್ಸಾಹಿಸಬೇಕಿದೆ ಎಂದು ತಿಳಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮೂಲಸೌಕರ್ಯ ಸಮಿತಿ ಚರ‍್ಮನ್ ಸುಕುಮಾರ್ ಅವರು ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳಿಗೆ ಶಿವಮೊಗ್ಗ ವಿಮಾನ ನಿಲ್ದಾಣ, ಮಾರ್ಗಗಳ ಹಾಗೂ ಅಗತ್ಯತೆಗಳ ಬಗ್ಗೆ ಮಾಹಿತಿ ನೀಡಿದರು.

ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ವಾಣಿಜ್ಯ, ಕೈಗಾರಿಕೆ ಹಾಗೂ ಉದ್ಯಮಿಗಳ ಅವಶ್ಯಕತೆಗಳನ್ನು ತಿಳಿದುಕೊಳ್ಳುವ ಪ್ರಯುಕ್ತ ಹಾಗೂ ವಿಮಾನ ಸಂಚಾರ ಮಾರ್ಗಗಳ ಕುರಿತು ಸಂವಾದ ನಡೆಸಿದರು.

ಟ್ರೇಡ್ಸ್ ಅಸಿಸ್ಟೆಂಟ್ ಮ್ಯಾನೇಜರ್ ಮನೋಜ್ ಪ್ರಭು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಮರಿಸ್ವಾಮಿ, ಹಾಲಸ್ವಾಮಿ, ಎಂ.ರಾಜು, ಗಣೇಶ್ ಅಂಗಡಿ, ರಮೇಶ್ ಹೆಗಡೆ, ಪರಮೇಶ್ವರ್, ಬೆನಕಪ್ಪ, ಸುರೇಶ್, ಕಿರಣ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...