Wednesday, December 17, 2025
Wednesday, December 17, 2025

ಹೆದ್ದಾರಿ ತಡೆ ರೈತರ ಪ್ರತಿಭಟನೆ

Date:

ಕೃಷಿ ಕಾಯ್ದೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಹೆದ್ದಾರಿ ತಡೆದು ರೈತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿಲ್ಲಿ ರೈತರ ಹೋರಾಟದ ವರ್ಷಾಚರಣೆ ಮತ್ತು ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಟ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ಮತ್ತು ಹೆದ್ದಾರಿ ತಡೆಗೆ ಕರೆ ನೀಡಿತ್ತು.
ಪ್ರಧಾನಿ ಮೋದಿ ಮೂರು ಕೃಷಿ ಕಾಯ್ದೆಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ವಾಪಸ್ ಪಡೆದಿದ್ದಾರೆ. ಇದರ ಹಿಂದೆ ರೈತರ ಹಿತ, ಕಾಳಜಿ ಕಾಣುತ್ತಿಲ್ಲ. ಹೀಗಾಗಿ ಎಲ್ಲಾ ಬೇಡಿಕೆ ಈಡೇರುವವರೆಗೂ ಹೋರಾಟ .
ಕನಿಷ್ಠ ಬೆಂಬಲ ಬೆಲೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿ ಮಾಡಬೇಕು. ಜಲ ಜೀವನ್ ಮಿಷನ್ ಹೆಸರಿನಲ್ಲಿ ಗ್ರಾಮೀಣ ಪ್ರದೇಶದ ಮನೆಗಳ ನೀರಿನ ಸಂಪರ್ಕ ಮೀಟರ್ ಅಳವಡಿಕೆ ನಿರ್ಧಾರ ಕೈಬಿಡಬೇಕು.
ಹಾಲು ಒಕ್ಕೂಟ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ಬೆಲೆಯನ್ನು ನಾಲ್ಕು ರೂಪಾಯಿ ಕಡಿಮೆ ಮಾಡಿದೆ. ಮತ್ತೊಂದೆಡೆ ಗ್ರಾಹಕರಿಗೆ ಹಳೆಯ ದರದಲ್ಲೇ ಹಾಲು ಮಾರುತ್ತಿದೆ. ಈ ಮೂಲಕ ಇಬ್ಬರಿಗೂ ವಂಚನೆ ಮಾಡಲಾಗುತ್ತಿದೆ. ಇದನ್ನು ಸರಿಪಡಿಸಿ ಹಿಂದಿನ ದರದ ಪ್ರಕಾರ ವಹಿವಾಟು ನಡೆಸಬೇಕು.
ಹೋರಾಟದಲ್ಲಿ ಹುತಾತ್ಮರಾದ ರೈತರ ಅವಲಂಬಿತರಿಗೆ ಮಾಸಿಕ ಭತ್ಯೆ ನೀಡಬೇಕು. ರೈತರ ಮೇಲಿನ ಮೊಕದ್ದಮೆ, ಹಿಂಪಡೆಯಬೇಕು.
ಅನಾವೃಷ್ಟಿ, ಅತಿವೃಷ್ಟಿಯಿಂದ ಆಗಿರುವ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಈ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...