Sunday, August 23, 2026
Sunday, August 23, 2026

Voters Awareness in Shivamogga ವಿದ್ಯಾವಂತರು ಮತದಾನದ ಬಗ್ಗೆ ನಿರಾಸಕ್ತಿ ತೋರಬಾರದು- ಶ್ರೀಕಾಂತ್

Date:

Voters Awareness in Shivamogga ಶಿವಮೊಗ್ಗ, ಪಟ್ಟಣಗಳಲ್ಲಿ ವಾಸವಿರುವ ವಿದ್ಯಾವಂತರೇ ಮತಗಟ್ಟೆಗೆ ಬಾರದೆ ನಿರಾಸಕ್ತಿ ತೋರಿಸುವುದು ಸರಿಯಲ್ಲ. ಪ್ರಜಾಪ್ರಭುತ್ವ ನಮಗೆ ಕೊಟ್ಟ ಅವಕಾಶ, ಅದನ್ನು ಬಳಸಿ ಸಮರ್ಥ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಕಳೆದುಕೊಳ್ಳಬಾರದು. ಉದಾಸೀನ ತೊರೆದು ಮತಗಟ್ಟೆಗೆ ಬರಲೇಬೇಕು ಎನ್ನುವ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಲವಾರು ಪ್ರಯತ್ನ ಮಾಡುತ್ತಿರುವುದನ್ನು ವಿವರಿಸಿದವರು ಜಿಲ್ಲಾ ಪಂಚಾಯತಿ ಲೆಕ್ಕಾಧಿಕಾರಿಗಳಾದ ಕೆ. ಎಸ್. ಶ್ರೀಕಾಂತ್ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಚುನಾವಣಾ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಸಮಿತಿ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಏಪ್ರಿಲ್ 24 ರಂದು ಏರ್ಪಡಿಸಿದ್ದ ಕವಿಗಳು ಬರೆದ ಕವನ, ಜಾನಪದ ಕಲಾವಿದರು ಹಾಡುವ ಲಾವಣಿ, ಗೀಗೀ ಪದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾವಿದರಾದ ಆಂಜನೇಯ ಜೋಗಿ ಅವರು ಲಾವಣಿ ಹಾಡಿದರು. ಕವಿಗಳಾದ ಸಾಗರದ ಗವಿಯಪ್ಪ, ಭದ್ರಾವತಿಯ ಕಾಂತಪ್ಪ, ಪ್ರೊ. ಸತ್ಯನಾರಾಯಣ, ಡಿ. ಗಣೇಶ್ ಕವನ ವಾಚಿಸಿದರು.

Voters Awareness in Shivamogga ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಶ್ರೀಮತಿ ಅನುಪಮ ಮತದಾರ ಜಾಗೃತಿಗೆ ಕೈಗೊಂಡ ಕ್ರಮಗಳನ್ನು ವಿವರಿಸಿದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಆದಿಮೂರ್ತಿ ಪಾರ್ಟಿ, ಪಕ್ಷ ನೋಡದೆ ಯೋಗ್ಯರಿಗೆ ಮತನೀಡಿ ಎಂದರು. ಪ್ರಿನ್ಸಿಪಾಲ್ ಡಾ. ಜಿ. ಮಧು ಮಾತನಾಡಿ ಪ್ರಥಮ ಮತದಾರರು ನೀವು. ನಿಮಗೆ ಅರಿವು ಮಾಡಿಕೊಡುವ ಈ ಕಾರ್ಯಕ್ರಮ ಅರ್ಥಪೂರ್ಣ ವಾಗಿದೆ ಎಂದರು.

ಮಹಾನಗರ ಪ್ರದೇಶಗಳಲ್ಲಿ ಸುಪ್ರಿಯಾ, ಕಜಾಪ ಸೋಮಿನಕಟ್ಟಿ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...