Monday, February 2, 2026
Monday, February 2, 2026

Kirloskar Ferrous Industries ಕಿರ್ಲೋಸ್ಕರ್ ಫೆರಸ್ ಕಾರ್ಖಾನೆ ವೀಕ್ಷಿಸಲು ಕಾರ್ಮಿಕ ಕುಟುಂಬಸ್ಥರಿಗೆ ಅವಕಾಶ

Date:

Kirloskar Ferrous Industries ಮೇ 1 ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯ ಉದ್ಯೋಗಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಾರ್ಖಾನೆಯನ್ನು ಸಂದರ್ಶಿಸಲು ಆಡಳಿತ ಮಂಡಳಿ ಅನುವು ಮಾಡಿಕೊಟ್ಟಿದೆ.

ದಿನಾಂಕ 1 -5 -2023 ರ ಸೋಮವಾರದಂದು ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1:30ರ ತನಕ ಕಾರ್ಖಾನೆಯ ಅನೇಕ ವಿಭಾಗಗಳನ್ನು ಸಂದರ್ಶಿಸಲು ಏರ್ಪಾಟು ಮಾಡಲಾಗಿತ್ತು. ಬೆಳಿಗ್ಗೆ 8 -30 ರಿಂದ ಮಧ್ಯಾಹ್ನ 1-00 ಘಂಟೆ ತನಕ ಕೊಪ್ಪಳ ಹೊಸಪೇಟೆ ಹಾಗೂ ಇನ್ನಿತರ ಭಾಗಗಳಿಂದ ನಮ್ಮ ಉದ್ಯೋಗಿಗಳು ತಮ್ಮ ಕುಟುಂಬದ ಸದಸ್ಯರುಗಳನ್ನು ಕರೆದುಕೊಂಡು ಬಂದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆದು ನಿಂತಿರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯನ್ನು ವೀಕ್ಷಣೆ ಮಾಡಿ ಆನಂದಿಸಿದರು. ಕಾರ್ಖಾನೆಯ ವೀಕ್ಷಿಸಲು ತೊಂದರೆಯಾಗದಂತೆ ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಆಡಳಿತ ಮಂಡಳಿಯು, ತಂಪು ಪಾನೀಯ, ಸಾರಿಗೆ ವ್ಯವಸ್ಥೆ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ಕಾರ್ಖಾನೆಯ ಸಂದರ್ಶನವನ್ನು ವಿವಿಧ ವಿಭಾಗದ ಉದ್ಯೋಗಿಗಳ ಸ್ವಯಂ ಸೇವಕರ ಸಹಕಾರದೊಂದಿಗೆ ವೀಕ್ಷಣೆಯನ್ನು ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕಾರ್ಖಾನೆಯ ಒಳಭಾಗದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ಹಾಕಿ ಉದ್ಯೋಗಿಯ ಕುಟುಂಬದ ಸದಸ್ಯರು ವಿಶ್ರಾಂತಿ ತೆಗೆದುಕೊಳ್ಳಲು ಅವಕಾಶ ಮಾಡಲಾಗಿತ್ತು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶ್ರೀ ಪಿ ನಾರಾಯಣ್ ಹಾಗೂ ಕಾರ್ಖಾನೆಯ ಪ್ರೆಸಿಡೆಂಟ್ ಶ್ರೀ ಸಿ. ರಮೇಶ ಅವರು ಈ ಸಂದರ್ಭದಲ್ಲಿ ಹಾಜರಿದ್ದರು. ಎಲ್ಲಾ ಉದ್ಯೋಗಿಗಳಿಗೆ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಿದರು.

ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ಎಲ್ಲಾ ಉದ್ಯೋಗಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು.

ಒಟ್ಟಾರೆ 2009ರಲ್ಲಿ ನಡೆದಂತಹ ಈ ಕಾರ್ಖಾನೆಯ ಸಂದರ್ಶನ ಮತ್ತೆ ಮರು ಕಳಿಸಿ ಈ ವರ್ಷ ಪ್ರಾರಂಭ ಮಾಡಿದ್ದಕ್ಕೆ ಕಾರ್ಮಿಕ ಸಂಘದ ಪ್ರದಾನ ಕಾರ್ಯದರ್ಶಿ ಶ್ರೀ ವಿಜಯ ಭಾಸ್ಕರ್ ರೆಡ್ಡಿ ಅವರು ಹರ್ಷವನ್ನ ವ್ಯಕ್ತಪಡಿಸುವುದರ ಮೂಲಕ ಆಡಳಿತ ಮಂಡಳಿಯ ಸದಸ್ಯರಿಗೆ ಧನ್ಯವಾದವನ್ನು ತಿಳಿಸಿದರು.

Kirloskar Ferrous Industries ಇಂದಿನ ಈ ಕಾರ್ಖಾನೆ ವೀಕ್ಷಣೆಗಾಗಿ ಸುಮಾರು 1000ಕ್ಕೂ ಹೆಚ್ಚು ಉದ್ಯೋಗಿ ಸದಸ್ಯರು ಭಾಗವಹಿಸಿ ಸಂತಸವನ್ನು ಹಂಚಿಕೊಂಡು ಕಾರ್ಖಾನೆಯನ್ನು ವೀಕ್ಷಣೆ ಮಾಡಿ ಸುರಕ್ಷಿತವಾಗಿ ತಮ್ಮ ಮನೆಗಳನ್ನು ಸೇರಿದರು.

ವರದಿ ಕೃಪೆ: ಮುರುಳಿಧರ್ ನಾಡಿಗೇರ್

Previous article
Next article

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...