Sunday, May 24, 2026
Sunday, May 24, 2026

ಕಸಾಪ ಅಧ್ಯಕ್ಷರಾಗಿ ಡಾ.ಮಹೇಶ್ ಜೋಶಿ ಪದಗ್ರಹಣ.

Date:

ಕಸಾಪ ಅಧ್ಯಕ್ಷರನ್ನಾಗಿ ಮತದಾರರು ನನ್ನನ್ನು ಚುನಾಯಿಸಿದ್ದಾರೆ. ನನ್ನನ್ನು ಐದು ವರ್ಷಗಳ ಕಾಲ ಯಾರು ಅಲುಗಾಡಿಸವಾಗುವುದಿಲ್ಲ . ಬೇರೆ ಅಕಾಡೆಮಿ, ಸಂಸ್ಥೆಗಳಲ್ಲಾದರೆ ಸರಕಾರ ನೇಮಕ ಮಾಡುತ್ತದೆ. ಯಾವಾಗ ಬೇಕೋ ಆಗ ತೆಗೆಯುವ ಅಧಿಕಾರವು ಸರ್ಕಾರಕ್ಕೆ ಇರುತ್ತದೆ. ಆದರೆ ಕಸಾಪ ಅಧ್ಯಕ್ಷ ಸ್ಥಾನ ಅಂಥದಲ್ಲ ಎಂದು ಮಹೇಶ್ ಜೋಶಿ ತಿಳಿಸಿದರು.
ಕಸಾಪದ 26ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ಅಮೂಲಾಗ್ರ ಬದಲಾವಣೆ ತರಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಜ್ಞರು ಸಮಿತಿ ರಚಿಸಲಾಗುವುದು. ಕಸಾಪ ಆಡಳಿತ ಮಂಡಳಿಗೆ 1915 ರಲ್ಲಿ ನಿಯಮಾವಳಿಗಳನ್ನು ಜಾರಿಗೆ ತರಲಾಯಿತು. ತದನಂತರ ತಿದ್ದುಪಡಿ ಮಾಡಿಲ್ಲ. ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ ನಿಬಂಧನೆ ಅಥವಾ ನಿಯಮಗಳನ್ನು ಅಮೂಲಾಗ್ರವಾಗಿ ಬದಲಾಯಿಸಬೇಕಾಗಿದೆ ಎಂದರು.
ಪರಿಷತ್ತಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಲು ಬಿಡುವುದಿಲ್ಲ. ಅಂತಹ ಸಂಗತಿಗಳು ನನ್ನ ಗಮನಕ್ಕೆ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಅಂತವರ ಸದಸ್ಯತ್ವವನ್ನು ಮೂರು ವರ್ಷಗಳ ಕಾಲ ಅಮಾನತು ಮಾಡಲಾಗುವುದು ಜೋಶಿ ತಿಳಿಸಿದರು.
ಕಸಾಪಗೆ ದೊಡ್ಡ ಇತಿಹಾಸವಿದೆ. ಈ ಸಂಸ್ಥೆಗೆ ನನ್ನ ಪತಿ ಚುನಾಯಿತರಾಗಿರುವುದು ಖುಷಿಯ ವಿಚಾರ. ಅವರು ರಾಜ್ಯಕ್ಕೆ, ಭಾಷೆಗೆ ಪ್ರತಿನಿಧಿಯಾಗಿದ್ದಾರೆ. ಅವರದ್ದು ಹೋರಾಟದ ಮನೋಭಾವ. ಹೀಗಾಗಿ ಅವರನ್ನು ಸಮಾಜಕ್ಕೆ ಮುಡುಪಾಗಿಟ್ಟಿದ್ದೇವೆ. ಅದಕ್ಕೆ ನಮ್ಮ ಕುಟುಂಬದ ಎಲ್ಲರೂ ಸಹಕಾರ ನೀಡುತ್ತೇವೆ ಎಂದು ಮಹೇಶ್ ಜೋಶಿ ಅವರ ಪತ್ನಿ ಮಾಲತಿ ಜೋಶಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...