Monday, February 2, 2026
Monday, February 2, 2026

Election Advertisement ಮಾಧ್ಯಮಗಳು ಚುನಾವಣಾ ಜಾಹಿರಾತು ಪ್ರಕಟಿಸಲು ಕಣ್ಗಾವಲು ಸಮಿತಿ ಅನುಮತಿ ಪಡೆಯಬೇಕು

Date:

Election Advertisement ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 9 ಹಾಗೂ 10 ರಂದು ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

 ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ 7 ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ ಸಲ್ಲಿಸಬೇಕು.


 ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

Election Advertisement ಪೂರ್ವಾನುಮತಿಗೆ ಅರ್ಜಿ ಲಭ್ಯ:
ಮೇ 09 ಹಾಗೂ 10 ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೊಗ್ಗ ಈ ಕಚೇರಿಯಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...