Wednesday, December 17, 2025
Wednesday, December 17, 2025

JDS Candidate Ayanuru Manjunath ಆಯನೂರು ಮಂಜುನಾಥ್ ಅವರಿಂದ ಕಾರ್ನರ್ ಮೀಟಿಂಗ್ ಮೂಲಕ ಮತಯಾಚನೆ

Date:

JDS Candidate Ayanuru Manjunath ಜೆಡಿಎಸ್‌ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಚುನಾವಣೆ ಪ್ರಚಾರ ಮತ್ತು ಕಾರ್ನರ್‌ ಮೀಟಿಂಗ್‌ ನಡೆಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರು ರೋಡ್‌ ಶೋನಲ್ಲಿ ಭಾಗವಹಿಸಿದರು.

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಒಂದನೇ ತಿರುವಿನಿಂದ 6ನೇ ತಿರುವಿನವರೆಗೆ, ಲಷ್ಕರ್‌ ಮೊಹಲ್ಲಾ, ಕೃಷಿ ನಗರ, ತ್ರಿಮೂರ್ತಿ ನಗರ, ಚೌಡೇಶ್ವರಿ ಕಾಲೋನಿ, ಪುರಲೆ, ಗಣೇಶ ಭವನ, ವಿದ್ಯಾನಗರ, ಟ್ಯಾಂಕ್‌ ಮೊಹಲ್ಲಾ, ಬೈಲ್‌ ಕಮ್ಮಾರ ಬೀದಿ, ಗಾಂಧಿ ಬಜಾರ್‌, ಸೀಗೆಹಟ್ಟಿಯಿಂದ ಹೊಳೆ ಬಸ್‌ ಸ್ಟಾಪ್‌ವರೆಗೆ, ಬುದ್ದ ನಗರ, ಮಿಳಘಟ್ಟ, ಗೋಪಾಳ, ಟಿಪ್ಪು ನಗರ, ಇಲಿಯಾಜ್‌ ನಗರ, ವೆಂಕಟೇಶ ನಗರ ಬಡಾವಣೆಗಳಲ್ಲಿ ಚುನಾವಣಾ ಪ್ರಚಾರ ನಡೆಯಿತು.

ಜೆಡಿಎಸ್‌ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ, ಎಂ.ಶ್ರೀಕಾಂತ್‌, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

JDS Candidate Ayanuru Manjunath ಪ್ರತಿ ಮನೆಗು ಕರಪತ್ರ ನೀಡಿದರು. ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್‌ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ರೋಡ್‌ ಶೋನಲ್ಲಿ ಭಾಗಹಿಸಿದ್ದರು.

ಶಿವಮೊಗ್ಗ ನಗರದ 32ನೇ ವಾರ್ಡ್‌ನಲ್ಲಿ ಜೆಡಿಎಸ್‌ ಪಕ್ಷದ ಆಯನೂರು ಮಂಜುನಾಥ ಅವರ ಪರವಾಗಿ ಮಹಿಳೆಯರು ಪ್ರತ್ಯೇಕವಾಗಿ ಪ್ರಚಾರ ನಡೆಸಿದರು. ವಾರ್ಡ್‌ನ ಪ್ರತಿ ಬೀದಿಯಲ್ಲಿ ಮಹಿಳೆಯರು ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ನಡೆಸಿದರು. ಮನೆ ಮನೆಗೆ ತೆರಳಿ ಕರಪತ್ರ ನೀಡಿ ಆಯನೂರು ಮಂಜುನಾಥ ಅವರ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...