Monday, February 2, 2026
Monday, February 2, 2026

Narendra Modi Speech in Ayunuru ಯುವ ಪೀಳಿಗೆಗೆ ಉದ್ಯೋಗಾವಕಾಶ ಬಿಜೆಪಿಯಿಂದ ಲಭಿಸುತ್ತಿದೆ- ನರೇಂದ್ರ ಮೋದಿ

Date:

Narendra Modi Speech in Ayunuru ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆ ನಡೆಯಿತು. ಈ ಸಭೆಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಮುದ್ರಾ ಯೋಜನೆಯ ಮುಖಾಂತರ ಯುವ ಪೀಳಿಗೆಯ ಗ್ಯಾರಂಟಿ ಬಿಜೆಪಿ ತೆಗೆದುಕೊಳ್ಳುತ್ತಿದೆ. ಅವರು ಉದ್ಯೋಗ ಆರಂಭಿಸಲು ಇದು ಸಹಕಾರಿಯಾಗಿದೆ ಸಾವಿರಾರು ಶಿವಮೊಗ್ಗ ವಾಸಿಗಳಿಗೆ ಉದ್ಯೋಗಾವಕಾಶ ಸಿಕ್ಕಿದೆ ಎಂದು ಹೇಳಿದರು.

ಕಾಂಗ್ರೆಸ್ನ ದಶಕಗಳ ಆಡಳಿತದಲ್ಲಿ ಮಹಿಳಾ ಸಬಲೀಕರಣ ಹಿಂದುಳಿದಿತ್ತು. ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಇರಲಿಲ್ಲ. ಆದ್ದರಿಂದ ಮಕ್ಕಳು ಶಾಲೆ ಬಿಡುತ್ತಿದ್ದರು. ಬಿಜೆಪಿ ಆ ಸಂಕಷ್ಟವನ್ನು ಪರಿಹರಿಸಿದೆ. ಬಹಳಷ್ಟು ಹೆಣ್ಣು ಮಕ್ಕಳು ಶಾಲೆಗೆ ಹೋಗಿ ಉನ್ನತ ಶಿಕ್ಷಣ ಕಲಿಯುತ್ತಿದ್ದಾರೆ ಎಂದರು.

Narendra Modi Speech in Ayunuru ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಾಸಕ ಕೆ. ಎಸ್ ಈಶ್ವರಪ್ಪ, ಸಂಸದ ಬಿ. ವೈ ರಾಘವೇಂದ್ರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ ಮೇಘರಾಜ್, ಚನ್ನಬಸಪ್ಪ, ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ, ಹರತಾಳು ಹಾಲಪ್ಪ, ಬಿ.ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ, ಮಂಗೋಟೆ ರುದ್ರೇಶ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...