Thursday, March 19, 2026
Thursday, March 19, 2026

Samanvaya Kashi ಮದುವೆ ಸಮಾರಂಭದಲ್ಲಿ ಮತದಾರರ ಜಾಗೃತಿ ಸಮನ್ವಯ ಟ್ರಸ್ಟ್ ಅಭಿಯಾನ

Date:

Samanvaya Kashi 2023ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದೆ. ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು. ಇದೇ ಸಂದರ್ಭದಲ್ಲಿ ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಮತದಾನ ಮಹತ್ವದ ಬಗ್ಗೆ ತಿಳಿಸಿದರು.
ಮತದಾನಕ್ಕೆ ಇನ್ನೂ 2-3 ದಿನ ಇದ್ದು, ಮತದಾನದ ಗುರುತೀನ ಚೀಟಿ ಹೊಂದಿರುವ ಪ್ರತಿಯೊಬ್ಬರು ಬುಧವಾರ ಮೇ 10ರಂದು ತಪ್ಪದೇ ಮತದಾನ ಮಾಡಬೇಕು. ನನ್ನ ಮತ ಮಾರಾಟಕ್ಕಿಲ್ಲ ಎಂಬ ಘೋಷ ವಾಕ್ಯದ ಬಗ್ಗೆಯು ಜಾಗೃತಿ ಮೂಡಿಸಲಾಯಿತು.

ಮತದಾನ ನಮ್ಮೆಲ್ಲರ ಹಕ್ಕು, ಮತ ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮತದಾನ ಜಾಗೃತಿ ಮಾಡಲಾಯಿತು.

ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರಿಗೆ ಮತದಾನ ಮಾಡುವಂತೆ, ಮತದಾನ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಮತದಾನದ ದಿನ ಬೆಳಗ್ಗೆ ತಪ್ಪದೇ ಮತ ಚಲಾಯಿಸುವಂತೆ “ನಾವು ಮತ ಚಲಾಯಿಸೋಣ” ಅಭಿಯಾನ ನಡೆಸಲಾಯಿತು.

Samanvaya Kashi ಸಮನ್ವಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...