Friday, March 20, 2026
Friday, March 20, 2026

Assembly Election ಮತದಾನ ಹಲವೆಡೆ ಹಬ್ಬ ಕೆಲವೆಡೆ ಅಬ್ಬಬ್ಬಾ!

Date:

Assembly Election ಕರ್ನಾಟಕ ಚುನಾವಣೆ 2023ರ ಮತದಾನ ಪ್ರಕ್ರಿಯೆ ಹಲವು ವಿಭಿನ್ನ ವಾತಾವರಣಕ್ಕೆ ಸಾಕ್ಷಿಯಾಗಿದೆ.

ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಉತ್ಸಾಹ ಇಮ್ಮಡಿಯಾಗಿತ್ತು. ಮತದಾನ ಬಹಿಷ್ಕಾರದಂತಹ ಘಟನೆ ಕೂಡ ನಡೆದವು.

ಗ್ರಾಮೀಣ ಪ್ರದೇಶದ ಮತದಾರರಿಗೆ ವಯಸ್ಸು ಮತ್ತು ಹವಾಮಾನ ಅಡೆತಡೆಗಳು ಕಾಳಜಿಯ ವಿಷಯವಾಗಿರಲಿಲ್ಲ. ಮತದಾನ ಪ್ರಕ್ರಿಯೆಯು ಯಾವುದೇ ಹಬ್ಬಕ್ಕಿಂತ ಕಡಿಮೆಯಿರಲಿಲ್ಲ.. ಜನರು ಹವಾಮಾನ, ವಯಸ್ಸು, ಆರೋಗ್ಯ ಇದಾವುದನ್ನೂ ಲೆಕ್ಕಿಸದೇ ಮತಗಟ್ಟೆಗಳತ್ತ ಧಾವಿಸಿ ಗಂಟೆಗಟ್ಟಲೆ ಕಾದು ಮತದಾನ ಮಾಡಿದ್ದಾರೆ.

ಗ್ರಾಮಾಂತರ ಪ್ರದೇಶಗಳಾದ ಮಾಗಡಿ ಗ್ರಾಮ, ತಾವರೆಕೆರೆ, ಸಾವನದುರ್ಗ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತದಾನ ಆರಂಭವಾದಾಗಿನಿಂದ ಸಂಜೆಯವರೆಗೂ ಉತ್ತಮ ಮತದಾನವಾಗಿತ್ತು.

ಅಂತೆಯೇ ಇದಕ್ಕೆ ವ್ಯತಿರಿಕ್ತ ಎಂಬಂತೆ ಒಂದರೆಡು ಭಾಗದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದಂತಹ ಘಟನೆಗಳೂ ಕೂಡ ವರದಿಯಾಗಿವೆ.

ಪುರುಷರು ಮತ್ತು ಮಹಿಳೆಯರು ಮರಗಳ ನೆರಳಿನಲ್ಲಿ ಕುಳಿತು ಮತದಾನ ಮಾಡಲು ತಾಳ್ಮೆಯಿಂದ ಕಾಯುತ್ತಿದ್ದರು. ಮತದಾನಕ್ಕೆ ಸಮಯ ಹಿಡಿಯುತ್ತದೆ ಎಂಬ ನಿರೀಕ್ಷೆಯಲ್ಲಿ ಕೆಲವರು ತಮ್ಮ ತಮ್ಮ ಆಹಾರವನ್ನೂ ಮೊದಲೇ ಪ್ಯಾಕ್ ಮಾಡಿಕೊಂಡು ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು.

Assembly Election ಆದರೆ ಮತದಾನ ಪ್ರಮಾಣ ಕಡಿಮೆ ಇರುವ ನಗರ ಪ್ರದೇಶಗಳಲ್ಲಿ ಕೊನೆಯ ಕ್ಷಣದಲ್ಲೂ ಪಕ್ಷದ ಕಾರ್ಯಕರ್ತರ ಪ್ರಚಾರ ಜೋರಾಗಿತ್ತು. ಬೂತ್ಗಳಿಗೆ ಬರುವ ಮತದಾರರ ಮೇಲೆ ಪ್ರಭಾವ ಬೀರಲು ಪಕ್ಷದ ಕಾರ್ಯಕರ್ತರು ಎಲ್ಲ ರೀತಿಯ ಕ್ರಮಗಳನ್ನು ಬಳಸಿಕೊಂಡರು.

ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಮತದಾರರು ಮತದಾನದ ಪ್ರಮಾಣವನ್ನು ಹೆಚ್ಚಿಸಲು ಅಷ್ಟೇನೂ ಆಸಕ್ತಿ ತೋರಿದಂತೆ ಕಾಣಲಿಲ್ಲ. ಬೂತ್ಗಳಲ್ಲಿದ್ದ ಪೊಲೀಸ್, ಅರೆಸೇನಾಪಡೆ ಮತ್ತು ಚುನಾವಣಾಧಿಕಾರಿಗಳು ಇದೇ ರೀತಿಯ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಈ ಹಿಂದೆ ಕೆಂಗೇರಿಯಲ್ಲಿ ನಿಯೋಜನೆಗೊಂಡಿದ್ದ ತಾವರೆಕೆರೆ ಮತಗಟ್ಟೆ ಅಧಿಕಾರಿಯೊಬ್ಬರು, ”ನಾನು ಕೆಲಸ ಮಾಡಿದ ಇತರ ಸ್ಥಳಗಳಿಗೆ ಹೋಲಿಸಿದರೆ ಇಲ್ಲಿ ಮತದಾರರ ಶೇಕಡಾವಾರು ಉತ್ತಮವಾಗಿದೆ. ಮಧ್ಯಾಹ್ನದವರೆಗೆ ಮತದಾರರ ಸಂಖ್ಯೆ ಆಶಾದಾಯಕವಾಗಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...