Sunday, April 12, 2026
Sunday, April 12, 2026

ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಕಳವಳ.

Date:

ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳಾದರೂ ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ. ಜಾತೀಯತೆ ಪ್ರೇರಿತ ಹಿಂಸಾಕೃತ್ಯ ಗಳು ಇನ್ನೂ ನಡೆಯುತ್ತಿವೆ ಎಂದು ಸುಪ್ರೀಂಕೋರ್ಟ್ ಆತಂಕವನ್ನು ವ್ಯಕ್ತಪಡಿಸಿದೆ.

ಜಾತಿಯ ಹೆಸರಿನಲ್ಲಿ ನಡೆಯುವ ಇಂತಹ ಘೋರ ಅಪರಾಧಗಳನ್ನು ನಾಗರಿಕ ಸಮಾಜ ಬಲವಾಗಿ ತಿರಸ್ಕರಿಸಬೇಕು’ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

1991ರ ಲ್ಲಿ ಉತ್ತರಪ್ರದೇಶದಲ್ಲಿ ಭೀಕರ ಹತ್ಯೆ ನಡೆದಿತ್ತು. ಮಹಿಳೆಯನ್ನು ಸೇರಿ ಮೂವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಂತರ ಪ್ರಕಟಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ ಆರ್ ಗವಾಯಿ ಅವರ ನ್ಯಾಯಪೀಠದಲ್ಲಿ ಈ ಕೃತ್ಯಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಲಾಗಿತ್ತು.

ಈ ಭೀಕರ ಹತ್ಯೆಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೋರ್ಟ್ ಹಲವು ನಿರ್ದೇಶನಗಳನ್ನು ನೀಡುತ್ತಲೇ ಬಂದಿದೆ. ಈ ನಿರ್ದೇಶನಗಳನ್ನು ಯಾವುದೇ ವಿಳಂಬವಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದೆ.

ಈ ರೀತಿಯ ಪ್ರಕರಣಗಳಲ್ಲಿ ಸಾಕ್ಷಿಗಳನ್ನು ರಚಿಸುವಲ್ಲಿ ಸರ್ಕಾರಗಳ ಪಾತ್ರ ಮಹತ್ವವಾಗಿದೆ. ಅದರಲ್ಲೂ, ಅಧಿಕಾರದಲ್ಲಿರುವವರು , ಹಣ ಪ್ರಭಾವ ಬೀರುವವರನ್ನು ಒಳಗೊಂಡ ಪ್ರಕರಣಗಳಲ್ಲಿ ಸಾಕ್ಷಿಗಳಿಗೆ ರಕ್ಷಣೆ ನೀಡುವುದು ಮುಖ್ಯ ಎಂದು ನ್ಯಾಯಪೀಠ ಹೇಳಿದೆ.

ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಲು ಅವರಿಗೆ ಸೂಕ್ತ ರಕ್ಷಣೆ ಸಿಗದಿರುವುದೇ ಕಾರಣ. ಇದು ಕಟು ವಾಸ್ತವ ಎಂದು ಕೂಡ ತಿಳಿಸಿದೆ.

ಜಾತಿ ಆಧಾರಿತ ಆಚರಣೆಗಳು ಮತಾಂಧತೆಯನ್ನು ಬೆಳೆಸುತ್ತವೆ. ಈ ರೀತಿಯ ಆಚರಣೆಗಳು ಈಗಲೂ ಅಸ್ತಿತ್ವದಲ್ಲಿದೆ. ಎಲ್ಲರೂ ಸಮಾನ ಎಂಬ ಸಂವಿಧಾನದ ಆಶಯಕ್ಕೆ ಇಂಥ ಆಚರಣೆಗಳು ಅಡ್ಡಿಯಾಗುತ್ತಿವೆ ಎಂದು ನ್ಯಾಯಪೀಠ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related