Thursday, February 5, 2026
Thursday, February 5, 2026

ಮನೆಮನೆ ಲಸಿಕಾ ಮಿತ್ರ -ಅಭಿಯಾನ

Date:

ಮೊದಲ ಡೋಸ್ ಕೊವಿಡ್ ಲಸಿಕೆ ಪಡೆಯಲು ಮುಗಿಬಿದ್ದ ಜನರು ಈಗ ಆರೋಗ್ಯ ಇಲಾಖೆಯವರು ಒತ್ತಾಯಿಸಿದರೂ ಎರಡನೇ ಡೋಸ್ ಪಡೆಯಲು ಒಪ್ಪುತ್ತಿಲ್ಲ. ನಿಧಾನಕ್ಕೆ ಕೊವಿಡ್
ಸಾಂಕ್ರಾಮಿಕ ರೋಗ ತಗ್ಗುತ್ತಿದ್ದಂತೆಯೇ ವ್ಯಾಕ್ಸಿನ್ ಪಡೆಯುವ ಜನರ ಧಾವಂತ ಕೂಡ ಕಡಿಮೆಯಾಗಿದೆ. ಮೊದಲ ಡೋಸ್ ಹಾಕಿಸಿಕೊಂಡವರಲ್ಲಿ 43 ಲಕ್ಷ ಜನರು ದ್ವಿತೀಯ ಲಸಿಕೆ ಅವಧಿ ಮುಗಿದರೂ ಹಾಕಿಸಿಕೊಂಡಿಲ್ಲ. ಓಮಿಕ್ರಾನ್ ವೈರಸ್ ವ್ಯಾಪಿಸುವುದನ್ನು ತಡೆಯುವ ಕ್ರಮವಾಗಿ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ಮುಂದಾಗಿದೆ. ಹಲವು ಜಿಲ್ಲಾಧಿಕಾರಿಗಳು ‘ನೋ ವ್ಯಾಕ್ಸಿನ್, ನೋ ಎಂಟ್ರಿ’ ನಿಯಮ ಜಾರಿಗೊಳಿಸಿದ್ದಾರೆ.
ಈಗ ನೀಡುತ್ತಿರುವ ಲಸಿಕೆ ಓಮಿಕ್ರಾನ್ ಮೇಲೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆ ಇನ್ನೂ ಅಧ್ಯಯನ ನಡೆದಿಲ್ಲ. ಆದರೆ ಎರಡೂ ಡೋಸ್ ಲಸಿಕೆ ಪಡೆದರೆ ಅಪಾಯದಿಂದ ಪಾರಾಗಬಹುದು. ಇದು ಅತಿವೇಗದಲ್ಲಿ ಹರಡುವ ಸಾಧ್ಯತೆ ಇರುವುದರಿಂದ, ಕೊವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಹಾಗೂ ಮಣಿಪಾಲ ಆಸ್ಪತ್ರೆಯ ಮುಖ್ಯಸ್ಥರಾಗಿರುವ ಡಾ. ಸುದರ್ಶನ್ ಬಲ್ಲಾಳ್ ಅವರು ತಿಳಿಸಿದ್ದಾರೆ.
ಒಂದೊಮ್ಮೆ ಮೂರನೇ ಅಲೆ ಎದುರಾದರೆ, ಎರಡೂ ಡೋಸ್ ಪಡೆದವರಿಗಷ್ಟೇ ಉಚಿತ ಚಿಕಿತ್ಸೆ ನೀಡುವ ನೀತಿ ರೂಪಿಸಲು ಸರ್ಕಾರ ಚಿಂತಿಸುತ್ತಿದೆ. ಕೊವಿಡ್ ನಿಂದ ಸಾವು ಸಂಭವಿಸಿದರೆ, ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪರಿಹಾರ ಸಿಗುವ ಸಾಧ್ಯತೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಎರಡು ಡೋಸ್ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಅಧಿಕಾರಿಯೊಬ್ಬರು ಮನವಿ ಮಾಡಿದ್ದಾರೆ.
ಲಸಿಕೆ ಅಭಿಯಾನದ ಅಂಗವಾಗಿ ‘ಮನೆಮನೆ ಲಸಿಕಾ ಮಿತ್ರ’ಯೋಜನೆಯಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬಸ್, ರೈಲು, ಮೆಟ್ರೊ ಮತ್ತು ವಿಮಾನ ನಿಲ್ದಾಣದಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ ಲಸಿಕಾಕರಣ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...