Saturday, April 4, 2026
Saturday, April 4, 2026

Shivamogga District Chamber Of Commerce ಉದ್ಯಮಗಳ ಯಶಸ್ಸಿನಲ್ಲಿ ಗ್ರಾಹಕರ ಸಲಹೆ ಸಹಕಾರ ಅತಿಮುಖ್ಯ-ಗೋಪಿನಾಥ್

Date:

Shivamogga District Chamber Of Commerce ಉದ್ಯಮಗಳು ಯಶಸ್ವಿಯಾಗಿ ನಡೆಯಲು ಗ್ರಾಹಕರ ಸಲಹೆ ಹಾಗೂ ಸಹಕಾರ ಅತ್ಯಂತ ಮುಖ್ಯ. ಸಾರ್ವಜನಿಕರು ಸಂಘ ಸಂಸ್ಥೆಗಳ ಸಹಕಾರದಿಂದ 24 ವರ್ಷ ಯಶಸ್ವಿಯಾಗಿ ಪೂರೈಸಿರುವುದು ಸಂತೋಷದ ಸಂಗತಿ ಎಂದು ಮಥುರಾ ಪ್ಯಾರಾಡೈಸ್ ಮತ್ತು ಮಥುರಾ ರೆಸಿಡೆನ್ಸಿ ಮಾಲೀಕ ಎನ್.ಗೋಪಿನಾಥ್ ಹೇಳಿದರು.

ಮಥುರಾ ಗ್ರೂಪ್ಸ್ 25ನೇ ವರ್ಷಕ್ಕೆ ಪಾದಾರ್ಪಾಣೆ ಮಾಡಿರುವ ಹಿನ್ನೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, 25 ವರ್ಷಕ್ಕೆ ನಮ್ಮ ಸಂಸ್ಥೆ ಕಾಲಿಟ್ಟಿದ್ದು, ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದಿಂದ ಉದ್ಯಮ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣಶೆಟ್ಟಿ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಗೋಪಿನಾಥ್ ಯಶಸ್ವಿಯಾಗುವ ಜತೆಯಲ್ಲಿ ವಿವಿಧ ಸಮಾಜಮುಖಿ ಸಂಘಟನೆಗಳಲ್ಲಿ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ. ಉದ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಯಶಸ್ವಿಯಾಗಲಿ ಎಂದು ಆಶಿಸಿದರು.

ವಾಣಿಜ್ಯ ಸಂಘ, ಪ್ರವಾಸೋದ್ಯಮ ಸಂಘಟನೆ, ಸಮಾಜಮುಖಿ ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಗೋಪಿನಾಥ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದರು.

Shivamogga District Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ. ವಿಜಯ್‌ಕುಮಾರ್, ನಿರ್ದೇಶಕ ಇ. ಪರಮೇಶ್ವರ್, ರಮೇಶ್ ಹೆಗಡೆ, ಗಣೇಶ ಅಂಗಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...