Saturday, December 6, 2025
Saturday, December 6, 2025

B. Y. Vijayendra ಶಿಕಾರಿಪುರ ಜನತೆಗೆ ಧನ್ಯವಾದ-ಬಿ.ವೈ.ವಿಜಯೇಂದ್ರ

Date:

B. Y. Vijayendra ಶಿಕಾರಿಪುರದ ಮಂಗಳ ಭವನದಲ್ಲಿ ಬಿಜೆಪಿ ವತಿಯಿಂದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ನಡೆಸಲಾಯಿತು.

ಈ ವೇಳೆ‌ ಮಾತನಾಡಿ ನೂತನ ಶಾಸಕ‌ ಬಿವೈ ವಿಜಯೇಂದ್ರ ಅವರು, ಶಿಕಾರಿಪುರ ತಾಲೂಕಿನಲ್ಲಿ ತಂದೆ ಬಿ.ಎಸ್ ಯಡಿಯೂರಪ್ಪನವರು ಸಹೋದರ ಸಂಸದ ಬಿವೈ ರಾಘವೇಂದ್ರ‌ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರ ಹಾದಿಯಲ್ಲಿ ನಾನು ತಾಲೂಕಿನ‌ ಜನರ ಸೇವೆ ಮಾಡಲು ಬದ್ದನಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು‌ ಹೋಗುತ್ತೇನೆ ಎಂದರು.

ನನ್ನ ಮೊದಲ ಚುನಾವಣೆಯಲ್ಲಿ ತಾಲೂಕಿನ‌ ಹಿರಿಯ ಕಿರಿಯ ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಿ ಜಯ ಗಳಿಸಲು ಸಹಕಾರ ನೀಡಿದ್ದಾರೆ. ಇದು ಕಾರ್ಯಕರ್ತರ ಗೆಲುವು ಬಿಜೆಪಿ ಗೆಲುವು ಎಲ್ಲಾ ಮತದಾರರಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ, ಪುತ್ರ ಬಿವೈ ವಿಜಯೇಂದ್ರರವರ ಮೊದಲ ಚುನಾವಣೆಯಲ್ಲಿ ತಾಲೂಕಿನ ಮತದಾರರು ಆರ್ಶಿವಾದ ಮಾಡಿ ಅವರಿಗೆ ಶಕ್ತಿ ತುಂಬಿದ್ದಾರೆ. ನಿಮ್ಮ ಎಲ್ಲಾ ಪ್ರೀತಿ ವಿಶ್ವಾಸ ಅಭಿಮಾನ ಅವರು ಉಳಿಸಿಕೊಂಡು ಹೊಗಲಿದ್ದಾರೆ ಎಂದರು.

B. Y. Vijayendra ಈ‌ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಎಂಎಲ್ ಸಿ ರುದ್ರೆಗೌಡ,ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿಡಿ ಮೇಘರಾಜ್‌, ಮುಖಂಡರಾದ
ಕೆ.ಎಸ್ ಗುರುಮೂರ್ತಿ, ಕೆ.ರೇವಣ್ಣಪ್ಪ, ಕೆ.ಹಾಲಪ್ಪ, ಚನ್ನವೀರಪ್ಪ, ಟಿ.ಎಸ್ ಮೋಹನ್,ಹೆಚ್ ಟಿ ಬಳಿಗಾರ್ ,ರಾಜಣ್ಣ ಕಬಾಡಿ,ರೇಖಾಬಾಯಿ ಮಂಜುಸಿಂಗ್, ವಿರೇಂದ್ರ ಪಾಟೀಲ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...