Sunday, May 3, 2026
Sunday, May 3, 2026

CM Siddaramaiah ಆನ್ ಲೈನ್ ಸಭೆ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಂದ ಡೀಸಿ ಮತ್ತು ಸಿಇಓ ಗಳಿಗೆ ಖಡಕ್ ಸೂಚನೆ

Date:

CM Siddaramaiah ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ, ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ
ಸೂಚಿಸಿದರು.

ಜಿಲ್ಲಾಧಿಕಾರಿಗಳು, ಸಿಈಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು ಕಾರಣ ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಹೇಳಿದರು.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.
ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು.
CM Siddaramaiah ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆನ್ ಲೈನ್ ಮೂಲಕ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಖಡಕ್ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...